ಸುಪ್ರೀಂಕೋರ್ಟ್‌ 
ದೇಶ

ಹೊಸ ಚುನಾವಣಾ ಆಯುಕ್ತರ ನೇಮಕ ಮಾಡದಂತೆ ಕೇಂದ್ರಕ್ಕೆ ತಡೆಯಾಜ್ಞೆ ನೀಡಿ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

2023ರ ಕಾನೂನು ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡದಂತೆ ಕೇಂದ್ರವನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

ನವದೆಹಲಿ: 2023ರ ಕಾನೂನು ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡದಂತೆ ಕೇಂದ್ರವನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

2023ರ ಕಾನೂನಿನ ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡದಂತೆ ಕೇಂದ್ರ ಸರಕಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸೂಚಿಸಿದ್ದ ಮಾರ್ಗಸೂಚಿಗಳಿಗೆ ಬದ್ಧವಾಗಿರಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಜತೆಗೆ ಪ್ರಧಾನ ಮಂತ್ರಿ, ವಿರೋಧ ಪಕ್ಷದ ನಾಯಕ ಸೇರಿದಂತೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯನ್ನು ನೇಮಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸುವಂತೆ ಠಾಕೂರ್ ಅರ್ಜಿಯಲ್ಲಿ ಕೋರಿದ್ದರು.

ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಸ್ ಸಿಗ್ ಮತ್ತು ವಕೀಲ ವರುಣ್ ಠಾಕೂರ್ ಅವರು ಅರ್ಜಿಯನ್ನು ತುರ್ತು ಪಟ್ಟಿ ಮಾಡುವಂತೆ ಮನವಿ ಮಾಡಿದರು. ಈ ಮನವಿಗೆ ನ್ಯಾಯಾಲಯ ಅಸ್ತು ಎಂದಿದೆ.

ಇಮೇಲ್ ಕಳುಹಿಸಿ, ನಾವು ನೋಡುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.

ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆ ಮತ್ತು ಕಳೆದ ತಿಂಗಳು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಎರಡು ಚುನಾವಣಾ ಆಯುಕ್ತರ ಹುದ್ದೆಗಳು ಖಾಲಿ ಬಿದ್ದಿವೆ.

ಈ ವಾರದ ನಂತರ ರಾಷ್ಟ್ರೀಯ ಚುನಾವಣೆಗಳನ್ನು ಘೋಷಿಸುವ ಸಾಧ್ಯತೆಯಿರುವುದರಿಂದ ಮೂರು ಸದಸ್ಯರ ಭಾರತೀಯ ಚುನಾವಣಾ ಆಯೋಗದಲ್ಲಿ ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾತ್ರ ಉಳಿದಿದ್ದಾರೆ.

ಭಾರತದಲ್ಲಿ ಚುನಾವಣಾ ಕಮಿಷನರ್‌ಗಳನ್ನು ಪ್ರಧಾನ ಮಂತ್ರಿ ಅಧ್ಯಕ್ಷತೆಯ ಮೂರು ಸದಸ್ಯರ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ. ಇದರಲ್ಲಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಕೂಡ ಇದ್ದಾರೆ. ವರದಿಗಳ ಪ್ರಕಾರ ಸಮಿತಿಯು ಮಾರ್ಚ್ 15 ರಂದು ಸಭೆ ಸೇರುವ ನಿರೀಕ್ಷೆಯಿದೆ.

ಮುಖ್ಯ ಚುನಾವಣಾ ಆಯುಕ್ತ ಮತ್ತು ಇಬ್ಬರು ಚುನಾವಣಾ ಆಯುಕ್ತರನ್ನು ನೇಮಿಸಲು ಹೊಸ ಕಾರ್ಯವಿಧಾನವನ್ನು ತರಲು ಸರ್ಕಾರವು ಡಿಸೆಂಬರ್‌ನಲ್ಲಿ ಹೊಸ ಕಾನೂನನ್ನು ಪರಿಚಯಿಸಿತ್ತು.

ಹೊಸ ನೇಮಕಾತಿಗಳನ್ನು ಅಂತಿಮಗೊಳಿಸುವ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಾಧೀಶರ ಬದಲು ಕೇಂದ್ರ ಸಚಿವರನ್ನು ಸಮಿತಿಯ ಭಾಗವಾಗಿಸಲು ಹೊಸ ಕಾನೂನು ಅವಕಾಶ ಮಾಡಿ ಕೊಡಲಿದೆ.

ಈ ಕಾನೂನನ್ನು ಪ್ರತಿಪಕ್ಷಗಳು ವಿರೋಧಿಸಿದ್ದು, ಇದು ಉನ್ನತ ಚುನಾವಣಾಧಿಕಾರಿಗಳ ನೇಮಕಾತಿಯಲ್ಲಿ ಸರ್ಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ, ಚುನಾವಣಾ ಸಂಸ್ಥೆಯ ಸ್ವಾಯತ್ತತೆಗೆ ರಾಜಿ ಮಾಡುತ್ತದೆ ಎಂದು ಆರೋಪಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT