ಸಾಂದರ್ಭಿಕ ಚಿತ್ರ 
ದೇಶ

ಸಿಎಎ ಜಾರಿಗೆ ಕೇಂದ್ರ ಅಧಿಸೂಚನೆ: ದೆಹಲಿಯ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ

ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ಮತ್ತು ರಾಷ್ಟ್ರ ರಾಜಧಾನಿಯ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ 2019(ಸಿಎಎ) ಜಾರಿಗೊಳಿಸಿ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ ನಂತರ ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ಮತ್ತು ರಾಷ್ಟ್ರ ರಾಜಧಾನಿಯ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ಭಾಗಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಈಶಾನ್ಯ ಮತ್ತು ಆಗ್ನೇಯ ದೆಹಲಿಯ ಭಾಗಗಳಲ್ಲಿ ಧ್ವಜ ಮೆರವಣಿಗೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯು 2020 ರಲ್ಲಿ ಸಿಎಎ ಮತ್ತು ಎನ್‌ಆರ್‌ಸಿ(ರಾಷ್ಟ್ರೀಯ ನಾಗರಿಕರ ನೋಂದಣಿ) ವಿರೋಧಿಸಿ ಭಾರೀ ಪ್ರತಿಭಟನೆ ಕೋಮುಗಲಭೆಗಳಿಗೆ ಸಾಕ್ಷಿಯಾಗಿತ್ತು.

"ದಿಲ್ಲಿಯ ಈಶಾನ್ಯ ಜಿಲ್ಲೆಯ ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯ ಸುರಕ್ಷತೆ ನಮ್ಮ ಜವಾಬ್ದಾರಿಯಾಗಿದೆ" ಎಂದು ಈಶಾನ್ಯ ಡಿಸಿಪಿ ಜಾಯ್ ಟಿರ್ಕಿ ಅವರು ಪಿಟಿಐಗೆ ತಿಳಿಸಿದ್ದಾರೆ.

ಸೂಕ್ಷ್ಮ ಪ್ರದೇಶಗಳಲ್ಲಿ ನಾಗರಿಕರ ಸುರಕ್ಷತೆಗಾಗಿ ಈಶಾನ್ಯ ಜಿಲ್ಲಾ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಗಳಿಂದ ತೀವ್ರ ಗಸ್ತು ಮತ್ತು ತಪಾಸಣೆ ನಡೆಸಲಾಗುತ್ತಿದೆ. ಪ್ರತಿಯೊಬ್ಬರೂ ಸುರಕ್ಷತಾ ಸೂಚನೆಗಳನ್ನು ಅನುಸರಿಸಲು ವಿನಂತಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

"ನಾವು ಅರೆಸೇನಾ ಪಡೆಗಳೊಂದಿಗೆ ರಾತ್ರಿ ಕಾವಲು ತೀವ್ರಗೊಳಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಪ್ರತಿಯೊಬ್ಬ ಸಾಮಾನ್ಯರ ಸುರಕ್ಷತೆಗಾಗಿ ನಾವು ಧ್ವಜ ಮೆರವಣಿಗೆಯನ್ನು ನಡೆಸಿದ್ದೇವೆ" ಎಂದು ಡಿಸಿಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT