ತಮಿಳು ನಟ ವಿಜಯ್ 
ದೇಶ

CAAಗೆ ತಮಿಳು ನಟ ವಿಜಯ್ ವಿರೋಧ; ತಮಿಳುನಾಡಿನಲ್ಲಿ ಜಾರಿಗೊಳಿಸದಂತೆ ಸರ್ಕಾರಕ್ಕೆ ಒತ್ತಾಯ

ಇತ್ತೀಚೆಗೆ ತಮ್ಮ ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ' ಅನ್ನು ಪ್ರಾರಂಭಿಸಿದ ತಮಿಳು ನಟ ವಿಜಯ್ ಅವರು ಮಂಗಳವಾರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು 'ವಿಭಜಕ' ಎಂದು ಕರೆದಿದ್ದಾರೆ ಮತ್ತು ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ಚೆನ್ನೈ: ಇತ್ತೀಚೆಗೆ ತಮ್ಮ ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ' ಅನ್ನು ಪ್ರಾರಂಭಿಸಿದ ತಮಿಳು ನಟ ವಿಜಯ್ ಅವರು ಮಂಗಳವಾರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು 'ವಿಭಜಕ' ಎಂದು ಕರೆದಿದ್ದಾರೆ ಮತ್ತು ಇದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೊಳಿಸುವುದಿಲ್ಲ ಎಂದು ಡಿಎಂಕೆ ಸರ್ಕಾರವು ಜನರಿಗೆ ಭರವಸೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸಿಎಎ ಅನ್ನು ಜಾರಿಗೊಳಿಸಲು ಕೇಂದ್ರವು ನಿನ್ನೆ ಅಧಿಸೂಚನೆಯನ್ನು ಹೊರಡಿಸಿತ್ತು.

ಈ ಕುರಿತು ಪಕ್ಷದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಿದ್ದು, 'ವಿಭಜಕ ರಾಜಕೀಯ' ಅನುಸರಿಸಿ ಜಾರಿಗೆ ತರುತ್ತಿರುವ ಸಿಎಎಯಂತಹ ಯಾವುದೇ ಕಾನೂನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ನಟ ವಿಜಯ್ ಅವರ ಪಕ್ಷ ತಮಿಳಗ ವೆಟ್ರಿ ಕಳಗಂ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದೆ. ಏಕೆಂದರೆ 2026ರ ವಿಧಾನಸಭಾ ಚುನಾವಣೆಯು ಅವರ ಗುರಿಯಾಗಿದೆ ಎಂದು ಅವರು ಈ ಮೊದಲೇ ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT