ಕಾಲಾ ಜತೇದಿ ಜೊತೆ ರಿವಾಲ್ವರ್ ರಾಣಿ ರಾಣಿ 
ದೇಶ

ದೆಹಲಿ: ಪೊಲೀಸರ ಭಾರೀ ಭದ್ರತೆ ನಡುವೆ ಗ್ಯಾಂಗ್‌ಸ್ಟರ್ ಕಾಲಾ ಜತೇದಿ ಜೊತೆ 'ರಿವಾಲ್ವರ್ ರಾಣಿ' ವಿವಾಹ

ಕುಖ್ಯಾತ ಗ್ಯಾಂಗ್‌ಸ್ಟರ್ ಸಂದೀಪ್ ಅಲಿಯಾಸ್ ಕಾಲಾ ಜತೇದಿ ಹಾಗೂ ರಿವಾಲ್ವರ್ ರಾಣಿ ಎಂದೇ ಹೆಸರಾದ ಅನುರಾಧಾ ಚೌಧರಿ ಅಲಿಯಾಸ್ ಮೇಡಂ ಮಿಂಜ್ ವಿವಾಹ ದೆಹಲಿಯ ದ್ವಾರಕಾ ಪ್ರದೇಶದಲ್ಲಿನ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯಿತು.

ನವದೆಹಲಿ: ಕುಖ್ಯಾತ ಗ್ಯಾಂಗ್‌ಸ್ಟರ್ ಸಂದೀಪ್ ಅಲಿಯಾಸ್ ಕಾಲಾ ಜತೇದಿ ಹಾಗೂ ರಿವಾಲ್ವರ್ ರಾಣಿ ಎಂದೇ ಹೆಸರಾದ ಅನುರಾಧಾ ಚೌಧರಿ ಅಲಿಯಾಸ್ ಮೇಡಂ ಮಿಂಜ್ ವಿವಾಹ ದೆಹಲಿಯ ದ್ವಾರಕಾ ಪ್ರದೇಶದಲ್ಲಿನ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯಿತು.

ಒಂದೇ 'ರಂಗ'ಕ್ಕೆ ಸೇರಿದ ಇಬ್ಬರು 'ಸಾಧಕರ' ಮದುವೆಗೆ ಅತಿಥಿಗಳಿಗಿಂತಲೂ ಪೊಲೀಸರೇ ಅಧಿಕ ಸಂಖ್ಯೆಯಲ್ಲಿ ಸೇರಿದ್ದ ಅಪರೂಪದ ಸನ್ನಿವೇಶವಿದು. ಇದು ನಮ್ಮ ಪೊಲೀಸ್ ವ್ಯವಸ್ಥೆ ಎಂತಹ ನಿಷ್ಪ್ರಯೋಜಕ ಕೆಲಸಗಳಿಗೆ ಬಳಕೆಯಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಯಿತು.

ಕುಖ್ಯಾತ ಗ್ಯಾಂಗ್‌ಸ್ಟರ್ ಸಂದೀಪ್ ಅಲಿಯಾಸ್ ಕಾಲಾ ಜತೇದಿ ಹಾಗೂ ರಿವಾಲ್ವರ್ ರಾಣಿ ಎಂದೇ ಹೆಸರಾದ ಅನುರಾಧಾ ಚೌಧರಿ ಅಲಿಯಾಸ್ ಮೇಡಂ ಮಿಂಜ್ ವಿವಾಹ ದಿಲ್ಲಿಯ ದ್ವಾರಕಾ ಪ್ರದೇಶದಲ್ಲಿನ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯಿತು.

ಬ್ಯಾಂಕ್ವೆಂಟ್ ಹಾಲ್‌ನ ಒಳಗೆ ಮತ್ತು ಹೊರಗೆ ಪೊಲೀಸರು ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಸಂದೀಪ್‌ನ ವಕೀಲರು ಮದುವೆಗಾಗಿ ದ್ವಾರಕಾ ವಲಯ- 3ರಲ್ಲಿನ ಸಂತೋಷ್ ಗಾರ್ಡನ್ ಬ್ಯಾಂಕ್ವೆಟ್ ಹಾಲ್‌ಗೆ 51 ಸಾವಿರ ರೂ. ನೀಡಿ ಬುಕ್ ಮಾಡಿದ್ದರು.

ಗ್ಯಾಂಗ್‌ಸ್ಟರ್ ಕಾಲಾ ಜತೇದಿಯ ಕುಖ್ಯಾತಿ ಹಾಗೂ ಹಿಂದಿನ ಕೃತ್ಯಗಳ ಇತಿಹಾಸವನ್ನು ಗಮನದಲ್ಲಿ ಇರಿಸಿಕೊಂಡು ಪೊಲೀಸರು, ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದಂತೆ ತಡೆಯಲು ವ್ಯವಸ್ಥಿತ ಭದ್ರತಾ ಯೋಜನೆ ರೂಪಿಸಿದ್ದರು ಎಂದು ಮೂಲಗಳು ತಿಳಿಸಿವೆ. 250 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

ಒಂದು ಕಾಲದಲ್ಲಿ ವಾಂಟೆಡ್ ಕ್ರಿಮಿನಲ್ ಆಗಿದ್ದ ಸಂದೀಪ್ ತಲೆಗೆ 7 ಲಕ್ಷ ರೂ ಬಹುಮಾನ ಘೋಷಿಸಲಾಗಿತ್ತು. ಸೋನಿಪತ್ ಮೂಲದ ಈತನಿಗೆ ಮದುವೆಗಾಗಿ ದೆಹಲಿ ನ್ಯಾಯಾಲಯವು ಆರು ಗಂಟೆಗಳ ಪೆರೋಲ್ ನೀಡಿತ್ತು.

ಈತನನ್ನು ವರಿಸಿರುವ ಅನುರಾಧಾ ಚೌಧರಿ ಕೂಡ ಸಾಮಾನ್ಯ ಮಹಿಳೆಯಲ್ಲ. ಈಕೆಗೆ ರಿವಾಲ್ವರ್ ರಾಣಿ ಎಂಬ ಅಡ್ಡಹೆಸರು ಇದೆ. ಈಕೆ ವಿರುದ್ಧ ಅನೇಕ ಅಪರಾಧ ಪ್ರಕರಣಗಳಿವೆ. ಎರಡು ವರ್ಷಗಳ ಹಿಂದೆ ಇವರಿಬ್ಬರನ್ನೂ ಬಂಧಿಸಲು 12 ರಾಜ್ಯಗಳಲ್ಲಿ ಪೊಲೀಸರ ತಂಡಗಳು ಬೃಹತ್ ಕಾರ್ಯಾಚರಣೆ ನಡೆಸಿತ್ತು ಎಂದರೆ ಇವರ ಕುಖ್ಯಾತಿ ಅರಿವಾಗಬಹುದು.

ಕಾಲಾ ಜತೇದಿ ಅಂತಾರಾಷ್ಟ್ರೀಯ ಜಾಲವನ್ನು ನಡೆಸುತ್ತಿದ್ದು, ಇದು ಬಾಡಿಗೆ ಕೊಲೆ, ಸಂಘಟಿತ ಕಳ್ಳಬಟ್ಟಿ ವ್ಯವಹಾರ, ಸುಲಿಗೆ ಮತ್ತು ಭೂ ಕಬಳಿಕೆಯ ಕೃತ್ಯಗಳಲ್ಲಿ ಭಾಗಿಯಾಗಿತ್ತು. ದೆಹಲಿ ಮತ್ತು ಹರ್ಯಾಣ ಪೊಲೀಸರು ಈತ ಬೆನ್ನು ಬಿದ್ದಿದ್ದರು. 2021ರ ಜುಲೈನಲ್ಲಿ ಈತ ಉತ್ತರ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದ.

ಸುಮಾರು ಅರ್ಧ ಗಂಟೆಯ ನಂತರ ಮಂತ್ರಗಳ ಪಠಣ ಮುಗಿದ ನಂತರ ಇಬ್ಬರನ್ನು ಪತಿ-ಪತ್ನಿ ಎಂದು ಘೋಷಿಸಲಾಯಿತು. ಮಧ್ಯಾಹ್ನ 3.50 ರ ಸುಮಾರಿಗೆ ಜಥೇದಿಯನ್ನು ಅದೇ ಪೊಲೀಸ್ ವ್ಯಾನ್‌ನಲ್ಲಿ ತಿಹಾರ್‌ ಜೈಲಿಗೆ ಕರೆದುಕೊಂಡು ಹೋಗಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT