ಸಿಎಎ ಜಾರಿ ಹಿನ್ನೆಲೆಯಲ್ಲಿ ಭದ್ರತೆ 
ದೇಶ

ಸಿಎಎ ಜಾರಿ: ಶಾಹಿನ್ ಬಾಗ್ ನಿವಾಸಿಗಳಲ್ಲಿ ಹೆಚ್ಚಿದ ಆತಂಕ!

ಕೇಂದ್ರ ಗೃಹ ಇಲಾಖೆ ಸಿಎಎ ಜಾರಿಗೆ ಅಧಿಸೂಚನೆ ಪ್ರಕಟಿಸಿದ್ದು, ಶಾಹಿನ್ ಭಾಗ್ ನಿವಾಸಿಗಳಲ್ಲಿ ಅತಂಕವನ್ನು ಹೆಚ್ಚಿಸಿದೆ.

ನವದೆಹಲಿ: ಕೇಂದ್ರ ಗೃಹ ಇಲಾಖೆ ಸಿಎಎ ಜಾರಿಗೆ ಅಧಿಸೂಚನೆ ಪ್ರಕಟಿಸಿದ್ದು, ಶಾಹಿನ್ ಬಾಗ್ ನಿವಾಸಿಗಳಲ್ಲಿ ಅತಂಕವನ್ನು ಹೆಚ್ಚಿಸಿದೆ. ತಮ್ಮ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದ್ದು, ಸಿಎಎ ಜಾರಿಯ ಬಗ್ಗೆ ಶಾಹಿನ್ ಭಾಗ್ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

4 ವರ್ಷಗಳ ಹಿಂದೆ ಸರ್ಕಾರ ಸಿಎಎ ಅಂಗೀಕರಿಸಿದ್ದಾಗ ದೆಹಲಿಯ ಶಾಹಿನ್ ಭಾಗ್ ನಲ್ಲಿ ಮಹಿಳೆಯರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಕೋವಿಡ್ ಸೋಂಕು ಎದುರಾಗುವುದಕ್ಕೂ ಮೊದಲು 4 ತಿಂಗಳ ಕಾಲ ಈ ಪ್ರದೇಶದಲ್ಲಿ ಸಿಎಎ ವಿರುದ್ಧ ತೀವ್ರ ಪ್ರತಿಭಟನೆಗಳಾಗಿದ್ದವು. ಸಿಎಎ ಜಾರಿಗೊಳಿಸಲಾಗಿರುವ ಹಿನ್ನೆಲೆಯಲ್ಲಿ ಜೆಎಂಐ ವಿವಿ ಸೇರಿದಂತೆ ಶಾಹಿನ್ ಭಾಗ್ ನ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸಿಎಎ ಜಾರಿಯಿಂದ ಅಸ್ಥಿರತೆ ತಮ್ಮನ್ನು ಕಾಡುತ್ತಿದೆ ಎಂದು ಈ ಪ್ರದೇಶದ ನಿವಾಸಿಯಾಗಿರುವ ಯೂಸೂಫ್ ಮಾಧ್ಯಮಗಳೊಂದಿಗೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದು ಸರ್ಕಾರ ತಮ್ಮನ್ನು ದೂರ ತಳ್ಳಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ವ್ಯಾಪಾರಿಯಾಗಿರುವ ಅಹ್ಮದ್ ಎಂಬುವವರು ಯೂಸೂಫ್ ಅವರ ಭಾವನೆಗಳನ್ನೇ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ಹೊರಹಾಕಿದ್ದು ಸ್ಥಳೀಯರಲ್ಲಿ ಅಸಹಾಯಕ ಭಾವನೆ ಮೂಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT