ಮನೋಹರ್ ಲಾಲ್ ಖಟ್ಟರ್
ಮನೋಹರ್ ಲಾಲ್ ಖಟ್ಟರ್ 
ದೇಶ

ಶಾಸಕ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ; ಸಿಎಂ ಸೈನಿ ಕ್ಷೇತ್ರ ನೋಡಿಕೊಳ್ಳುತ್ತಾರೆ ಎಂದ ಹರಿಯಾಣ ಮಾಜಿ ಸಿಎಂ

Lingaraj Badiger

ಚಂಡೀಗಢ: ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳ ನಡುವೆ ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಕರ್ನಾಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಖಟ್ಟರ್ ಅವರು ಹೊಸದಾಗಿ ನೇಮಕಗೊಂಡ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ತಮ್ಮ ಕ್ಷೇತ್ರವನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ನಯಾಬ್ ಸಿಂಗ್ ಸೈನಿ ಸರ್ಕಾರ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದ್ದಾರೆ.

ಖಟ್ಟರ್ ಅವರು ಮಂಗಳವಾರ ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಸೈನಿ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡರು.

ಪ್ರಸ್ತುತ ಸಂಸದರಾಗಿರುವ ನಯಾಬ್ ಸಿಂಗ್ ಸೈನಿ ಅವರು ಖಟ್ಟರ್ ರಾಜೀನಾಮೆಯಿಂದ ತೆರವಾಗುವ ಕರ್ನಾಲ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

SCROLL FOR NEXT