ಎಡಪ್ಪಾಡಿ ಕೆ ಪಳನಿಸ್ವಾಮಿ - ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ 
ದೇಶ

ಎಐಎಡಿಎಂಕೆ ಮುಖ್ಯಸ್ಥ ಪಳನಿಸ್ವಾಮಿ, ಬಿಜೆಪಿಯ ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಸೆಷನ್ಸ್ ನ್ಯಾಯಾಲಯದಲ್ಲಿ ಗುರುವಾರ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರುದ್ಧ ಡ್ರಗ್ಸ್ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಸೆಷನ್ಸ್ ನ್ಯಾಯಾಲಯದಲ್ಲಿ ಗುರುವಾರ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಇಂದು ಪ್ರತ್ಯೇಕವಾಗಿ ಸಲ್ಲಿಸಿದ ದೂರುಗಳಲ್ಲಿ ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ದೇವರಾಜನ್ ಅವರು ಕಲಂ 499 ಮತ್ತು 500 ಐಪಿಸಿ(ಮಾನನಷ್ಟ) ಅಡಿಯಲ್ಲಿ ಈ ಇಬ್ಬರು ನಾಯಕರನ್ನು ಶಿಕ್ಷಿಸುವಂತೆ ಕೋರಿದ್ದಾರೆ.

ರಾಜ್ಯ ವಿರೋಧ ಪಕ್ಷದ ನಾಯಕ ಪಳನಿಸ್ವಾಮಿ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಅವರ ಪ್ರತಿಷ್ಠೆಗೆ ಧಕ್ಕೆ ತರಲು ಉದ್ದೇಶಿಸಲಾಗಿದೆ ಎಂದು ದೇವರಾಜನ್ ಆರೋಪಿಸಿದ್ದಾರೆ.

‘ಮಾದಕ ಮುಕ್ತ ತಮಿಳುನಾಡು’ ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಲವು ಕ್ರಮಗಳನ್ನು ಕೈಗೊಂಡಿರುವ ಸಂದರ್ಭದಲ್ಲಿ, ಪಳನಿಸ್ವಾಮಿ ಮತ್ತು ಅಣ್ಣಾಮಲೈ ಅವರ ಮಾನಹಾನಿಕರ ಹೇಳಿಕೆಯು ಮಾದಕ ದ್ರವ್ಯ ದಂಧೆಕೋರರಿಗೆ ನೆರವು ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT