ಮನೀಶ್ ಸಿಸೋಡಿಯಾ TNIE
ದೇಶ

ಲೋಕಸಭೆ ಚುನಾವಣೆಗೂ ಮುನ್ನ ಮನೀಶ್ ಸಿಸೋಡಿಯಾಗೆ ತೀವ್ರ ಹಿನ್ನಡೆ: ಕ್ಯುರೇಟಿವ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮಾರ್ಚ್ 4 ರಂದು ಸಿಸೋಡಿಯಾ ಆಪಾದಿತ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ತಮ್ಮ ಕ್ಯುರೇಟಿವ್ ಅರ್ಜಿಯನ್ನು ತಕ್ಷಣ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರು ಜಾಮೀನು ನಿರಾಕರಿಸುವ 2023ರ ನಿರ್ಧಾರದ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಮಾರ್ಚ್ 4 ರಂದು ಸಿಸೋಡಿಯಾ ಆಪಾದಿತ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ತಮ್ಮ ಕ್ಯುರೇಟಿವ್ ಅರ್ಜಿಯನ್ನು ತಕ್ಷಣ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರು ಜಾಮೀನು ನಿರಾಕರಿಸುವ 2023ರ ನಿರ್ಧಾರದ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

2023ರ ಅಕ್ಟೋಬರ್ 30ರಂದು ಆಪಾದಿತ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಸಿಸೋಡಿಯಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಇದಾದ ಬಳಿಕ ಡಿಸೆಂಬರ್ 14ರಂದು ಸುಪ್ರೀಂ ಕೋರ್ಟ್ ಕೂಡ ಅವರ ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿತ್ತು. ಕ್ಯುರೇಟಿವ್ ಅರ್ಜಿಯ ಮೂಲಕ ಅವರು ಈ ಆದೇಶವನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು.

ಸಿಸೋಡಿಯಾ ಅವರನ್ನು 2023ರ ಫೆಬ್ರವರಿ 26ರಂದು ಪ್ರಕರಣ ಸಂಬಂಧ ಸಿಬಿಐ ಬಂಧಿಸಿತು. ಸಿಬಿಐ ಎಫ್‌ಐಆರ್‌ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) 2023ರ ಮಾರ್ಚ್ 9ರಂದು ಸಿಸೋಡಿಯಾ ಅವರನ್ನು ಬಂಧಿಸಿತು. ಹೀಗಾಗಿ 2023ರ ಫೆಬ್ರವರಿ 28ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಿಬಿಐ ಮತ್ತು ಇಡಿ ಈ ಆರೋಪ

ದೆಹಲಿ ಅಬಕಾರಿ ನೀತಿ 2020-21 ಅನ್ನು ಪರಿಷ್ಕರಿಸುವಾಗ ಅಕ್ರಮಗಳು ನಡೆದಿವೆ ಎಂದು ಸಿಬಿಐ ಮತ್ತು ಇಡಿ ಆರೋಪಿಸಿದೆ. ಪರವಾನಗಿದಾರರಿಗೆ ಅನಗತ್ಯ ಪ್ರಯೋಜನಗಳನ್ನು ನೀಡಲಾಗಿದೆ. ಪರವಾನಗಿ ಶುಲ್ಕವನ್ನು ಮನ್ನಾ ಅಥವಾ ಕಡಿಮೆ ಮಾಡಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಪರವಾನಗಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!