ದ್ವಾರಕ ಸಮುದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ PTI
ದೇಶ

ಪ್ರಾರ್ಥನೆ ಸಲ್ಲಿಸಲು ನೀರಿನ ಆಳಕ್ಕೆ ಹೋಗುತ್ತಾರೆ, ಆದರೆ ಉದ್ಯೋಗಗಳಿಲ್ಲ: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಟೀಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ದ್ವಾರಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ದ್ವಾರಕದಲ್ಲಿ ಸಮುದ್ರದಲ್ಲಿ ಮುಳುಗಡೆಯಾಗಿರುವ ಭಗವಾನ್ ಕೃಷ್ಣನ ಕಾಲದಲ್ಲಿದ್ದ ನಗರವಿದ್ಧ ಪ್ರದೇಶದಲ್ಲಿ ಪ್ರಾರ್ಥನೆ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ನೀರಿನ ಆಳದಲ್ಲಿ ಇಳಿದಿದ್ದರು. ಈ ಬಗ್ಗೆ ರಾಹುಲ್ ಗಾಂಧಿ ಟೀಕಾ ಪ್ರಹಾರ ನಡೆಸಿದ್ದಾರೆ.

ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸುವುದಕ್ಕಾಗಿ ನೀರಿನ ಆಳಕ್ಕೆ ಇಳಿಯುತ್ತಾರೆ. ಆದರೆ ಹಣದುಬ್ಬರ ಹಾಗೂ ನಿರುದ್ಯೋಗದಂತಹ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ರಾಹುಲ್ ಆರೋಪಿಸಿದ್ದಾರೆ.

ಮಹಾರಾಷ್ಟ್ರದ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ನಾಸಿಕ್‌ನ ಕೃಷಿ ಉತಪನ್ ಬಜಾರ್ ಸಮಿತಿಯಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಕಾಂಗ್ರೆಸ್ ಮುಖ್ಯಸ್ಥ, "ರೈತರ ಸಮಸ್ಯೆಗಳು, ಹಣದುಬ್ಬರ, ನಿರುದ್ಯೋಗ ಮತ್ತು ಅಗ್ನಿವೀರರ ಸಮಸ್ಯೆಗಳು ಇಂದು ದೇಶದಲ್ಲಿ ಪ್ರಮುಖವಾಗಿವೆ, ಆದರೆ ಟಿವಿ ಚಾನೆಲ್‌ಗಳಲ್ಲಿ, ಈ ವಿಷಯಗಳ ಕುರಿತು ನೀವು ಎಂದಿಗೂ ಚರ್ಚೆಯನ್ನು ನೋಡುವುದಿಲ್ಲ. "ಬದಲಿಗೆ, ಟಿವಿ ಚಾನೆಲ್‌ಗಳು ಮೋದಿ ಜಿಯನ್ನು 24 ಗಂಟೆಗಳ ಕಾಲ ತೋರಿಸುತ್ತವೆ; ಕೆಲವೊಮ್ಮೆ ಅವರು ಪೂಜೆ ಮಾಡಲು ಸಮುದ್ರದ ಕೆಳಗೆ ಹೋಗುತ್ತಾರೆ ಮತ್ತು ಟಿವಿ ಕ್ಯಾಮೆರಾ ಅವರೊಂದಿಗೆ ಹೋಗುತ್ತದೆ, ನಂತರ ಅವರು ಸೀಪ್ಲೇನ್‌ನಲ್ಲಿ ಹಾರುತ್ತಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್