ಅರವಿಂದ ಕೇಜ್ರಿವಾಲ್  
ದೇಶ

ಅಬಕಾರಿ ಹಗರಣ ಸಮನ್ಸ್: ಸೆಷನ್ಸ್ ನ್ಯಾಯಾಲಯ ಮೊರೆ ಹೋದ ಅರವಿಂದ್ ಕೇಜ್ರಿವಾಲ್

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ದಿವ್ಯಾ ಮಲ್ಹೋತ್ರಾ ಅವರು ಹೊರಡಿಸಿದ ಆದೇಶದ ವಿರುದ್ಧ ಕೇಜ್ರಿವಾಲ್ ಸೆಷನ್ಸ್ ನ್ಯಾಯಾಲಯಕ್ಕೆ ಮೊರೆ

ನವದೆಹಲಿ: ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಳ ನ್ಯಾಯಾಲಯವು ತಮಗೆ ನೀಡಿದ್ದ ಸಮನ್ಸ್ ನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ದಿವ್ಯಾ ಮಲ್ಹೋತ್ರಾ ಅವರು ಹೊರಡಿಸಿದ ಆದೇಶದ ವಿರುದ್ಧ ಕೇಜ್ರಿವಾಲ್ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಮಾರ್ಚ್ 16 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಿದ್ದಾರೆ.

ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಹಲವು ಸಮನ್ಸ್‌ಗಳನ್ನು ಕೈಬಿಟ್ಟಿದ್ದಕ್ಕಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯ (ED) ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎರಡು ದೂರುಗಳನ್ನು ಸಲ್ಲಿಸಿತ್ತು.

ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕರು ಅಕ್ರಮ ಹಣ ವರ್ಗಾವಣೆ (PMLA) ಸೆಕ್ಷನ್ 50 ರ ಅಡಿಯಲ್ಲಿ ಫೆಡರಲ್ ತನಿಖಾ ಸಂಸ್ಥೆ ಕಳುಹಿಸಿದ ನಾಲ್ಕರಿಂದ ಎಂಟು ಸಮನ್ಸ್‌ಗಳನ್ನು ಸಂಬಂಧಿಸಿದೆ ಎಂದು ಇಡಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT