ಜೈರಾಮ್ ರಮೇಶ್ 
ದೇಶ

'One nation, no election': ಏಕಕಾಲಕ್ಕೆ ಚುನಾವಣೆ ಕುರಿತು ಕೋವಿಂದ್ ವರದಿಗೆ ಕಾಂಗ್ರೆಸ್ ಕಿಡಿ

'ಒಂದು ರಾಷ್ಟ್ರ, ಆದ್ರೆ ಚುನಾವಣೆ ಇಲ್ಲ' ಎಂಬ ಉದ್ದೇಶದಿಂದ ಸಂವಿಧಾನವನ್ನು ಸಂಪೂರ್ಣವಾಗಿ ನಾಶಮಾಡಲು ಬಿಜೆಪಿ ಬಯಸುತ್ತಿದೆ ಎಂದು ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದೆ.

ನವದೆಹಲಿ: 'ಒಂದು ರಾಷ್ಟ್ರ, ಚುನಾವಣೆ ಇಲ್ಲ' ಎಂಬ ಉದ್ದೇಶದಿಂದ ಸಂವಿಧಾನವನ್ನು ಸಂಪೂರ್ಣವಾಗಿ ನಾಶಮಾಡಲು ಬಿಜೆಪಿ ಬಯಸುತ್ತಿದೆ ಎಂದು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ, ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದ ನಂತರ ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ಸುಮಾರು 18,000 ಪುಟಗಳ ವರದಿಯಲ್ಲಿ, ಕೋವಿಂದ್ ನೇತೃತ್ವದ ಸಮಿತಿ, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮತ್ತು 100 ದಿನಗಳ ಅಂತರದಲ್ಲಿ ಪುರಸಭೆ ಚುನಾವಣೆ ನಡೆಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಈ ಬಗ್ಗೆ ನಾಸಿಕ್‌ನಲ್ಲಿ ಪಿಟಿಐಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಪ್ರಧಾನಿ ಅವರ ಉದ್ದೇಶ ತುಂಬಾ ಸ್ಪಷ್ಟವಾಗಿದೆ. ಅವರು ಸ್ಪಷ್ಟ ಬಹುಮತ, ಮೂರನೇ ಎರಡರಷ್ಟು ಬಹುಮತ ಮತ್ತು 400 ಸ್ಥಾನಗಳನ್ನು ಕೇಳುತ್ತಿದ್ದಾರೆ. ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಸಂಪೂರ್ಣವಾಗಿ ನಾಶಮಾಡಲು ಬಯಸುತ್ತಾರೆ ಮತ್ತು 'ಒಂದು ರಾಷ್ಟ್ರ, ಚುನಾವಣೆ ಇಲ್ಲ' ಎಂಬುದು ಉದ್ದೇಶ ಎಂದು ಹೇಳಿದ್ದಾರೆ.

ಇದು ರಾಜಕೀಯ ವಿಷಯವಲ್ಲ. ಹಣ ಮತ್ತು ಇತರ ಸಂಪನ್ಮೂಲಗಳನ್ನು ಉಳಿಸುವ ಗುರಿ ಹೊಂದಿದೆ ಎಂದು ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ-ಇರಾನ್ ಶಾಂತಿ ಒಪ್ಪಂದ 'ಈಗ ಸಂಪೂರ್ಣ: ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್- ಡೊನಾಲ್ಡ್ ಟ್ರಂಪ್ ಘೋಷಣೆ!

ರಾಜ್ಯದಲ್ಲಿ ಮುಂಗಾರು ಚುರುಕು: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ yellow ಅಲರ್ಟ್, ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಜಗತ್ತನ್ನು ಬೆರಗುಗೊಳಿಸಿದ ಮಾನವ ನಿರ್ಮಿತ ಅದ್ಭುತಗಳು: ಜೀವನದಲ್ಲಿ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ ಪ್ರವಾಸಿ ತಾಣಗಳಿವು..!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕೋಲಾಹಲ: TMC ಬಂಡಾಯ ಗುಂಪು ಕಾಕೋಲಿ ಘೋಷ್ ನೇತೃತ್ವದಲ್ಲಿ NCP ಜೊತೆ ವಿಲೀನ!

ಜ್ವಾಲಾಮುಖಿ ಕುಳಿಗೆ ಬಿದ್ದ 'ಯೆಮೆನ್‌ನ ಸ್ಪೈಡರ್-ಮ್ಯಾನ್': ದುರಂತ ಕ್ಯಾಮೆರಾದಲ್ಲಿ ಸೆರೆ! Video

SCROLL FOR NEXT