ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು 
ದೇಶ

ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು ನೇಮಕ

ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ನೇಮಕ ಮಾಡಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ನೇಮಕ ಮಾಡಿದೆ.

ಈ ಬಗ್ಗೆ ಸಮಿತಿಯ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಗುರುವಾರ ಮಾಹಿತಿ ನೀಡಿದ್ದು, ಇಂದು ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸಭೆ ಮುಗಿದ ಕೂಡಲೇ ತಮ್ಮ ನಿವಾಸದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಚೌಧರಿ, ಇಬ್ಬರು ಚುನಾವಣಾ ಅಯುಕ್ತರ ಆಯ್ಕೆಗೆ ಆರು ಹೆಸರುಗಳು ಬಂದಿದ್ದು, ಸಂಧು ಮತ್ತು ಕುಮಾರ್ ಅವರ ಹೆಸರನ್ನು ಉನ್ನತಾಧಿಕಾರ ಸಮಿತಿಯ ಬಹುಪಾಲು ಸದಸ್ಯರು ಅಂತಿಮಗೊಳಿಸಿದ್ದಾರೆ ಎಂದು ಹೇಳಿದರು.

ಆದಾಗ್ಯೂ, ಭಾರತದ ಮುಖ್ಯ ನ್ಯಾಯಾಧೀಶರು ಆಯ್ಕೆ ಸಮಿತಿಯ ಭಾಗವಾಗಬೇಕಿತ್ತು ಮತ್ತು ಕಾನೂನು ಸಚಿವರ ನೇತೃತ್ವದ ಶೋಧನಾ ಸಮಿತಿಯ ಮುಂದೆ ಬಂದಿದ್ದಾರೆ ಎಂದು ಹೇಳಲಾದ 200 ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಆರು ಹೆಸರುಗಳನ್ನು ಹೇಗೆ ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಅವರು ಹೇಳಿದರು.

ಶಾರ್ಟ್‌ಲಿಸ್ಟ್ ಮಾಡಿದ ಆರು ಹೆಸರುಗಳಲ್ಲಿ ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು, ಸುಧೀರ್ ಕುಮಾರ್ ಗಂಗಾಧರ್ ರಹಾಟೆ ಇದ್ದು ಎಲ್ಲರೂ ಮಾಜಿ ಅಧಿಕಾರಿಗಳಾಗಿದ್ದಾರೆ. ಆರು ಹೆಸರುಗಳ ಪೈಕಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರ ಹೆಸರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ಅಂತಿಮಗೊಳಿಸಲಾಗಿದೆ ಎಂದು ಅವರು ಹೇಳಿದರು.

ಆರ್ಟಿಕಲ್ 370 ರದ್ದತಿಯಲ್ಲಿ ಕೆಲಸ ಮಾಡಿದ್ದ ಅಧಿಕಾರಿಗಳು

ಗೃಹ ಸಚಿವಾಲಯದಲ್ಲಿ ಅವರ ಅಧಿಕಾರಾವಧಿಯಲ್ಲಿ, ಜ್ಞಾನೇಶ್ ಕುಮಾರ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ಕಲ್ಪಿಸುವ 370ನೇ ವಿಧಿಯ ರದ್ದತಿ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಿದ್ದರು.

ಫೆಬ್ರವರಿ 14 ರಂದು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ನಂತರ ಚುನಾವಣಾ ಆಯುಕ್ತರ ಹುದ್ದೆಗಳು ಖಾಲಿಯಾಗಿದ್ದವು. ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಈ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡುವ ಅನಿವಾರ್ಯತೆ ಕೇಂದ್ರ ಸರ್ಕಾರಕ್ಕೆ ಇತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT