ದೇಶ

ಮಮತಾ ಬ್ಯಾನರ್ಜಿ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಗುರುವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಗುರುವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮಮತಾ ಬ್ಯಾನರ್ಜಿ ಆರೋಗ್ಯ ಸಂಬಂಧ ಹೇಳಿಕೆ ನೀಡಿರುವ ಹಿರಿಯ ಅಧಿಕಾರಿಗಳು, ಮಮತಾ ಅವರ ಹಣೆ ಹಾಗೂ ಮೂಗಿಗೆ ಗಾಯಗಳಾಗಿದ್ದವು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ. ಹಿರಿಯ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದರು. ರಾತ್ರಿ ಉತ್ತಮವಾಗಿ ನಿದ್ರಿಸಿದ್ದಾರೆಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಹಣೆಗೆ ಮೂರು ಹಾಗೂ ಮೂಗಿನ ಮೇಲೆ ಒಂದು ಹೊಲಿಗೆ ಹಾಕಲಾಗಿದೆ. ಅಗತ್ಯ ವೈದ್ಯಕೀಯ ಪರೀಕ್ಷೆಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಮತಾ ಅವರ ಹಣೆ ಮತ್ತು ಮೂಗಿನ ಮೇಲೆ ತೀಕ್ಷ್ಣವಾದ ಗಾಯಗಳಾಗಿದ್ದವು, ಅದರಿಂದ ತೀವ್ರವಾಗಿ ರಕ್ತಸ್ರಾವವಾಗಿತ್ತು. ಆರಂಭದಲ್ಲಿ, ನಮ್ಮ ಸಂಸ್ಥೆಯ ನರಶಸ್ತ್ರಚಿಕಿತ್ಸೆ, ಔಷಧ ಮತ್ತು ಹೃದ್ರೋಗ ವಿಭಾಗದ ಹಿರಿಯ ವೈದ್ಯರು ಅವರನ್ನು ಪರೀಕ್ಷೆಗೆ ಒಳಪಡಿಸಿದರು. ಬಳಿಕ, ಹಣೆಗೆ ಮೂರು ಹೊಲಿಗೆಗಳನ್ನು ಹಾಕಲಾಯಿತು. ಅಗತ್ಯವಿದ್ದ ಡ್ರೆಸ್ಸಿಂಗ್ ಮಾಡಲಾಯಿತು. ಇಸಿಜಿ, ಎಕೋಕಾರ್ಡಿಯೋಗ್ರಾಮ್, ಸಿಟಿ ಸ್ಕ್ಯಾನ್ ಮತ್ತು ಡಾಪ್ಲರ್‌ನಂತಹ ಪರೀಕ್ಷೆಗಳನ್ನು ನಡೆಸಲಾಯಿತು. ನಿಗಾದಲ್ಲಿ ಇರಬೇಕಾಗಿರುವುದರಿಂದ ಆಸ್ಪತ್ರೆಯಲ್ಲಿ ಇರುವಂತೆ ಸೂಚಿಸಲಾಯಿತಾದರೂ ಮಮತಾ ಮನೆಗೆ ತೆರಳಿದ್ದಾರೆ ಎಂದು ಎಸ್‌ಎಸ್‌ಕೆಎಂ ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂಡೋಪಾಧ್ಯಾಯ ತಿಳಿಸಿದ್ದಾರೆ.ಮ

ಈ ನಡುವೆ ಘಟನೆಯ ಹಿಂದಿನ ಕಾರಣವನ್ನು ಕೋಲ್ಕತ್ತಾ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ತನಿಖೆ ಕೈಗೆತ್ತಿಕೊಂಡಿರುವ ಅಧಿಕಾರಿಗಳು ದಕ್ಷಿಣ ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಒಳ ಮತ್ತು ಹೊರ ಆವರಣದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಿದ್ದು, ಮುಖ್ಯಮಂತ್ರಿ ನಿವಾಸದಲ್ಲಿ ನಿಯೋಜನೆಗೊಂಡಿರುವ ಭದ್ರತಾ ಸಿಬ್ಬಂದಿಯನ್ನೂ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ