ಲೋಕಸಭೆ ಚುನಾವಣೆ ಮತದಾನ 
ದೇಶ

ಲೋಕಸಭಾ ಚುನಾವಣಾ ವೇಳಾಪಟ್ಟಿ ಮಾರ್ಚ್ 16 ಮಧ್ಯಾಹ್ನ 3 ಗಂಟೆಗೆ ಬಿಡುಗಡೆ: ಚುನಾವಣಾ ಆಯೋಗ

ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ನಾಳೆ ಮಧ್ಯಾಹ್ನ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ನಾಳೆ ಮಧ್ಯಾಹ್ನ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಹೌದು.. 2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗ ನಾಳೆ ಪತ್ರಿಕಾಗೋಷ್ಠಿ ಕರೆದಿದ್ದು, ನಾಳೆ ಅಂದರೆ ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.

ಅಲ್ಲದೆ ಈ ಸುದ್ದಿಗೋಷ್ಠಿಯನ್ನು ಟ್ವಿಟರ್/ಎಕ್ಸ್ ಪ್ಲಾಟ್ ಫಾರ್ಮ್ ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದೆ.

17 ನೇ ಲೋಕಸಭೆಯ ಅಧಿಕಾರಾವಧಿಯು 16 ಜೂನ್ 2024 ರಂದು ಕೊನೆಗೊಳ್ಳಲಿದೆ.

4 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೂ ನಾಳೆ ಮುಹೂರ್ತ

ಲೋಕಸಭೆ ಮಾತ್ರವಲ್ಲದೇ 4 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೂ ನಾಳೆ ಮುಹೂರ್ತ ಫಿಕ್ಸ್ ಆಗಲಿದ್ದು, ಏಪ್ರಿಲ್/ಮೇ ತಿಂಗಳಲ್ಲಿ ಮತದಾನ ನಡೆಯಲಿರುವ ನಾಲ್ಕು ರಾಜ್ಯಗಳೆಂದರೆ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ, ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

2019ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಗೆಲುವು ಸಾಧಿಸಿ ಒಟ್ಟು 303 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿತ್ತು. ಈ ಚುನಾವಣೆಯಲ್ಲಿ ಒಟ್ಟು 912 ಮಿಲಿಯನ್ ಅರ್ಹ ಮತದಾರರ ಪೈಕಿ ಶೇ. 67%ರಷ್ಟು ಮತದಾನವಾಗಿತ್ತು. ಈ ಪೈಕಿ ಬಿಜೆಪಿ 37.36% ಮತಗಳನ್ನು ಪಡೆದಿದ್ದರೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಒಟ್ಟು 353 ಸ್ಥಾನಗಳನ್ನು ಗೆದ್ದಿತ್ತು.

ಇದಕ್ಕೆ ವ್ಯತಿರಿಕ್ತವಾಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದು ವಿರೋಧ ಪಕ್ಷದ ನಾಯಕತ್ವವನ್ನು ಪಡೆಯಲು ಅಗತ್ಯವಿರುವ ಶೇ.10% ಕ್ಕಿಂತ ಕಡಿಮೆಯಾಗಿದೆ. ಅಂತೆಯೇ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA) 91 ಸ್ಥಾನಗಳನ್ನು ಪಡೆದುಕೊಂಡಿತ್ತು. ಇತರ ಪಕ್ಷಗಳು 98 ಸ್ಥಾನಗಳನ್ನು ಗೆದ್ದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT