ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಟಿಎಂಸಿಯ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರ್ಪಡೆ

ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರು ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೋಲ್ಕತಾ: ಲೋಕಸಭೆ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಹಿನ್ನೆಡೆಯಾಗಿದ್ದು, ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರು ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬರಾಕ್‌ಪುರ ಸಂಸದ ಅರ್ಜುನ್ ಸಿಂಗ್ ಮತ್ತು ತಮ್ಲುಕ್ ಸಂಸದ ದಿಬ್ಯೇಂದು ಅಧಿಕಾರಿ ಅವರಿಗೆ ಈ ಬಾರಿ ಟಿಎಂಸಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಸೇರಿದ್ದಾರೆ.

ಲೋಕಸಭೆ ಚುನಾವಣೆಗೆ ಟಿಎಂಸಿಯ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟ ಕೆಲವೇ ದಿನಗಳಲ್ಲಿ ಟಿಎಂಸಿ ತೊರೆಯುವುದಾಗಿ ಅರ್ಜುನ್ ಸಿಂಗ್ ಘೋಷಿಸಿದ್ದರು.

ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಸಹೋದರ, ತಾಮ್ಲುಕ್ ಅಧಿಕಾರಿ ಅವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ನಾಯಕರಾದ ದುಷ್ಯಂತ್ ಗೌತಮ್ ಮತ್ತು ಅಮಿತ್ ಮಾಳವೀಯ ಸಮ್ಮುಖದಲ್ಲಿ ಈ ಇಬ್ಬರು ಸಂಸದರು ಬಿಜೆಪಿಗೆ ಸೇರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT