ಭಾರತ್ ರಾಷ್ಟ್ರ ಸಮಿತಿ (BRS) ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ದೆಹಲಿಯ ಅಬಕಾರಿ ನೀತಿಯಲ್ಲಿ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರಾದರು.  
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇಡಿ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಬಿಆರ್‌ಎಸ್‌ ನಾಯಕಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ನ್ಯಾಯಾಲಯ ಮುಂದೆ ಹಾಜರುಪಡಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಬಿಆರ್‌ಎಸ್‌ ನಾಯಕಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ನ್ಯಾಯಾಲಯ ಮುಂದೆ ಹಾಜರುಪಡಿಸಿದೆ.

ತೆಲಂಗಾಣ ವಿಧಾನ ಪರಿಷತ್ ಸದಸ್ಯೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಅವರ ಮುಂದೆ ಹಾಜರುಪಡಿಸಿದ್ದು, ಅವರು ಶೀಘ್ರದಲ್ಲೇ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ನಾವು ನ್ಯಾಯಾಲಯ ಮುಂದೆ ಹೋರಾಟ ನಡೆಸುತ್ತೇವೆ ಎಂದು ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಿನ್ನೆ ಸಂಜೆ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಅವರ ನಿವಾಸದಿಂದ ಕೇಂದ್ರ ತನಿಖಾ ಸಂಸ್ಥೆ ಬಂಧಿಸಿ ದೆಹಲಿಗೆ ಕರೆತಂದಿತ್ತು. ಜಾರಿ ನಿರ್ದೇಶನಾಲಯ 10 ದಿನಗಳ ಕಸ್ಟಡಿಗೆ ನ್ಯಾಯಾಲಯವನ್ನು ಕೋರುವ ಸಾಧ್ಯತೆಯಿದೆ.

2021-22 ರ ದೆಹಲಿಯ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯ ವ್ಯಾಪಾರಿಗಳ "ಸೌತ್ ಗ್ರೂಪ್" ಲಾಬಿಗೆ ಕವಿತಾ ಸಂಪರ್ಕ ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ವಿಜಯ್ ನಾಯರ್ ಅವರು ಶರತ್ ರೆಡ್ಡಿ, ಕವಿತಾ ಮತ್ತು ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ನಿಯಂತ್ರಣದಲ್ಲಿರುವ "ಸೌತ್ ಗ್ರೂಪ್" ನಿಂದ ಎಎಪಿ ನಾಯಕರ ಪರವಾಗಿ ಕನಿಷ್ಠ 100 ಕೋಟಿ ರೂಪಾಯಿಗಳಷ್ಟು ಲಂಚ ಪಡೆದಿದ್ದಾರೆ ಎಂದು ಅದು ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ