ಅರವಿಂದ್ ಕೇಜ್ರಿವಾಲ್  
ದೇಶ

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಜಾಮೀನು ಮಂಜೂರು!

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನವದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ದೆಹಲಿ ಇ ಡಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ ಹಿನ್ನೆಲೆ ಅವರು ದೆಹಲಿ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ದೆಹಲಿ ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಕೇಜ್ರಿವಾಲ್ ಗೆ ಇಡಿ ಅಧಿಕಾರಿಗಳು 8 ಬಾರಿ ಸಮನ್ಸ್ ನೀಡಿದ್ದರು. 8 ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನಲೆ ಇಡಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು. ನಂತರ ಕೋರ್ಟ್ ಕ್ರೇಜ್ರಿವಾಲ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು, ವಿಚಾರಣೆ ನಡೆಸಿದ ದೆಹಲಿ ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರನ್ನೊಳಗೊಡ ನ್ಯಾಯಪೀಠವು ಕೇಜ್ರಿವಾಲ್ ಅವರನ್ನು ಕೋರ್ಟ್ ನಿಂದ ಹೊರಹೋಗಲು ಅನುಮತಿ ನೀಡಿದೆ. ಅಪರಾಧವು ಜಾಮೀನು ಪಡೆಯಬಹುದಾದ ಕಾರಣ, ಆರೋಪಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ಒಪ್ಪಿಕೊಳ್ಳಲಾಗಿದೆ ಎಂದು ಅದು ಹೇಳಿದೆ.

ದೂರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಜ್ರಿವಾಲ್‌ಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ಇಡಿಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಅನೇಕ ಸಮನ್ಸ್‌ಗಳನ್ನು ಕೈಬಿಟ್ಟಿದ್ದಕ್ಕಾಗಿ ಅವರ ಪ್ರಾಸಿಕ್ಯೂಷನ್ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಮ್ಯಾಜಿಸ್ಟ್ರೀಯಲ್ ನ್ಯಾಯಾಲಯಕ್ಕೆ ಎರಡು ದೂರುಗಳನ್ನು ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ