ಮೇಲ್ಛಾವಣಿ ಸೌರ ಯೋಜನೆ 
ದೇಶ

ರೂಫ್ ಟಾಪ್ ಸೌರ ಯೋಜನೆಗೆ 1 ಕೋಟಿಗೂ ಹೆಚ್ಚು ಕುಟುಂಬಗಳ ನೋಂದಣಿ: ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮೇಲ್ಛಾವಣಿ ಸೌರ ಯೋಜನೆಗೆ ಈಗಾಗಲೇ ಸುಮಾರು 1 ಕೋಟಿಗೂ ಹೆಚ್ಚು ಕುಟುಂಬಗಳು ನೋಂದಣಿಯಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮೇಲ್ಛಾವಣಿ ಸೌರ ಯೋಜನೆಗೆ ಈಗಾಗಲೇ ಸುಮಾರು 1 ಕೋಟಿಗೂ ಹೆಚ್ಚು ಕುಟುಂಬಗಳು ನೋಂದಣಿಯಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವಿಟರ್/ಎಕ್ಸ್ ನಲ್ಲಿ ಶನಿವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಒಂದು ಕೋಟಿಗೂ ಹೆಚ್ಚು ಕುಟುಂಬಗಳು ಈಗಾಗಲೇ ಮೇಲ್ಛಾವಣಿ ಸೌರ ಯೋಜನೆ 'ಪಿಎಂ-ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ' ಅಡಿಯಲ್ಲಿ ನೋಂದಾಯಿಸಿಕೊಂಡಿವೆ ಮತ್ತು ಇದು 'ಅತ್ಯುತ್ತಮ ಸುದ್ದಿ' ಎಂದು ಶ್ಲಾಘಿಸಿದ್ದಾರೆ.

"ರಾಷ್ಟ್ರದ ಎಲ್ಲಾ ಭಾಗಗಳಿಂದ ನೋಂದಣಿಗಳು ಹರಿದುಬರುತ್ತಿವೆ. ಅಸ್ಸಾಂ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳು 5 ಲಕ್ಷಕ್ಕೂ ಹೆಚ್ಚು ನೋಂದಣಿಗಳನ್ನು ಕಂಡಿವೆ. ಇನ್ನೂ ನೋಂದಣಿ ಮಾಡದಿರುವವರು ಆದಷ್ಟು ಬೇಗ ನೋಂದಾಯಿಸಿಕೊಳ್ಳುವಂತೆ ಪ್ರಧಾನಮಂತ್ರಿ ಕೇಳಿಕೊಂಡರು.

ಈ ಉಪಕ್ರಮವು ಇಂಧನ ಉತ್ಪಾದನೆಯನ್ನು ಖಾತ್ರಿಪಡಿಸುವುದರ ಜೊತೆಗೆ ಮನೆಗಳಿಗೆ ವಿದ್ಯುತ್ ವೆಚ್ಚದಲ್ಲಿ ಗಣನೀಯ ಪ್ರಮಾಣದ ಕಡಿತವನ್ನು ಭರವಸೆ ನೀಡುತ್ತದೆ ಎಂದು ತಿಳಿಸಿದರು.

ಅಂತೆಯೇ ಇದು ಪರಿಸರಕ್ಕಾಗಿ ಜೀವನಶೈಲಿಯನ್ನು (ಲೈಫ್) ದೊಡ್ಡ ಪ್ರಮಾಣದಲ್ಲಿ ಪ್ರೋತ್ಸಾಹಿಸಲು ಸಿದ್ಧವಾಗಿದೆ, ಇದು ಉತ್ತಮ ಗೃಹಕ್ಕೆ ಕೊಡುಗೆ ನೀಡುತ್ತದೆ" ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಕಳೆದ ತಿಂಗಳು ರೂ. 75,021 ಕೋಟಿ ವೆಚ್ಚದ ರೂಫ್‌ಟಾಪ್ ಸೋಲಾರ್ ಪ್ಯಾನೆಲ್‌ಗಳನ್ನು ಸ್ಥಾಪಿಸಲು ಮತ್ತು ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ ಅನುಮೋದನೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT