ದತ್ತಾತ್ರೇಯ ಹೊಸಬಾಳೆ 
ದೇಶ

RSS ಸಾಮಾನ್ಯ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ.

ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ.

ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರು ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ಆಗಿ ಮರು ಆಯ್ಕೆಯಾಗಿದ್ದಾರೆ. ಸಂಘ ಪರಿವಾರದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಅಖಿಲ ಭಾರತೀಯ ಪ್ರತಿನಿಧಿ ಸಭಾ (ABPS) 2024-2027ರ ಮೂರು ವರ್ಷಗಳ ಅವಧಿಗೆ ಆರೆಸ್ಸೆಸ್‌ನ ನಂ. 2 ಹುದ್ದೆಗೆ ಹೊಸಬಾಳೆ ಅವರನ್ನು ಆಯ್ಕೆ ಮಾಡಿದೆ ಎಂದು ತಿಳಿದುಬಂದಿದೆ.

ಆರು ವರ್ಷಗಳ ನಂತರ ಆರ್‌ಎಸ್‌ಎಸ್‌ನ ಕೇಂದ್ರ ಕಚೇರಿ ನಾಗ್ಪುರದಲ್ಲಿ ಸಭೆ ನಡೆಯುತ್ತಿದೆ. ಆರ್‌ಎಸ್‌ಎಸ್‌ನ ವಿವಿಧ ಸಂಘಟನೆಗಳ 1,500ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. ನಾಗ್ಪುರದಲ್ಲಿ ನಡೆಯುತ್ತಿರುವ ಎಬಿಪಿಎಸ್ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದ್ದು, 9 ವರ್ಷಗಳ ಕಾಲ ಮೂರು ಅವಧಿಗೆ ಹುದ್ದೆಯನ್ನು ಅಲಂಕರಿಸಿದ ಸುರೇಶ್ 'ಭೈಯಾಜಿ' ಜೋಶಿ ಅವರ ಬದಲಿಗೆ 2021 ರಿಂದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರು ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

ಪ್ರಸ್ತುತ ಡಾ. ಮೋಹನ್‌ ಭಾಗವತ್‌ ಅವರು ನಂ.1 ಸ್ಥಾನವಾದ ಸರಸಂಘಚಾಲಕ್‌ ಪದವಿಯಲ್ಲಿದ್ದು, ಅವರ ನಂತರದ ಸ್ಥಾನದಲ್ಲಿ ಅಂದರೆ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರು ಕಾರ್ಯ ನಿರ್ವಹಿಸಲಿದ್ದಾರೆ.

70 ವರ್ಷದ ದತ್ತಾತ್ರೇಯ ಹೊಸಬಾಳೆ ಕರ್ನಾಟಕದ ಶಿವಮೊಗ್ಗದ ಸೊರಬ ಮೂಲದವರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT