ಬಂಧಿತ ಮೀನುಗಾರರು 
ದೇಶ

ಶ್ರೀಲಂಕಾದಿಂದ 21 ರಾಮೇಶ್ವರಂ ಮೀನುಗಾರರ ಬಂಧನ

ಅಂತಾರಾಷ್ಟ್ರೀಯ ಜಲ ಗಡಿ (ಐಎಂಬಿಎಲ್) ಉಲ್ಲಂಘನೆ ಆರೋಪದ ಮೇಲೆ ರಾಮೇಶ್ವರಂ ಮೂಲದ 21 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಭಾನುವಾರ ಮುಂಜಾನೆ ಬಂಧಿಸಿದೆ.

ರಾಮನಾಥಪುರಂ: ಅಂತಾರಾಷ್ಟ್ರೀಯ ಜಲ ಗಡಿ (ಐಎಂಬಿಎಲ್) ಉಲ್ಲಂಘನೆ ಆರೋಪದ ಮೇಲೆ ರಾಮೇಶ್ವರಂ ಮೂಲದ 21 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಭಾನುವಾರ ಮುಂಜಾನೆ ಬಂಧಿಸಿದೆ. ಹೆಚ್ಚಿನ ತನಿಖೆಗಾಗಿ ಅವರನ್ನು ಕಂಕಸಂತುರೈ ಬಂದರಿಗೆ ಕರೆದೊಯ್ಯಲಾಗಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾಗಿರುವುದರಿಂದ ತಾವು ಅಸಹಾಯಕರಾಗಿದ್ದೇವೆ ಎಂದು ರಾಮೇಶ್ವರಂನಲ್ಲಿರುವ ಮೀನುಗಾರರ ಸಂಘ ಹೇಳಿದೆ.

ರಾಮೇಶ್ವರಂ ಮೀನುಗಾರಿಕಾ ಬಂದರಿನಿಂದ ಶನಿವಾರ ಸಮುದ್ರಕ್ಕೆ ತೆರಳಿದ್ದ 480 ಯಾಂತ್ರೀಕೃತ ದೋಣಿಗಳ ಪೈಕಿ, ಶ್ರೀಲಂಕಾ ನೌಕಾಪಡೆಯು ಐಎಂಬಿಎಲ್‌ಗೆ ಸಮೀಪದಲ್ಲಿದ್ದ ಭಾರತೀಯ ದೋಣಿಗಳನ್ನು ಓಡಿಸಿದೆ. ಎರಡು ದೋಣಿಗಳು ಲಂಕಾದ ನೀರಿನಲ್ಲಿ ಉಳಿದುಕೊಂಡಿದ್ದು, ಅದರ 21 ಸಿಬ್ಬಂದಿಯನ್ನು ಲಂಕಾ ನೌಕಾಪಡೆ ವಶಕ್ಕೆ ತೆಗೆದುಕೊಂಡಿದೆ ಎಂದು ಹೇಳಲಾಗಿದೆ.

ಈ ಮಧ್ಯೆ ಉತ್ತರ ನೌಕಾ ಕಮಾಂಡ್ ಡೆಲ್ಫ್ಟ್ ದ್ವೀಪದ ಶ್ರೀಲಂಕಾದ ನೀರಿನಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿರುವುದನ್ನು ಗಮನಿಸಿದ ನಂತರ ಭಾರತೀಯ ದೋಣಿಗಳ ಗುಂಪನ್ನು ಓಡಿಸಲು ಫಾಸ್ಟ್ ಅಟ್ಯಾಕ್ ಕ್ರಾಫ್ಟ್ ಅನ್ನು ನಿಯೋಜಿಸಿದೆ ಎಂದು ಶ್ರೀಲಂಕಾದ ನೌಕಾಪಡೆಯ ಅಧಿಕೃತ ಮೂಲಗಳು ಹೇಳಿವೆ. ಕಾರ್ಯಾಚರಣೆ ಪರಿಣಾಮವಾಗಿ ಎರಡು ಭಾರತೀಯ ದೋಣಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಶ್ರೀಲಂಕಾದ ಸಮುದ್ರದಲ್ಲಿ ಉಳಿದುಕೊಂಡಿದ್ದ 21 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ದೋಣಿಗಳು ಮತ್ತು ಮೀನುಗಾರರನ್ನು ಕಂಕಸಂತುರೈ ಬಂದರಿಗೆ ತರಲಾಗಿದ್ದು, ಕಾನೂನು ಕ್ರಮಕ್ಕಾಗಿ ಮೈಲಾಡಿ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗಿದೆ. ಭಾನುವಾರದ ಬಂಧನದೊಂದಿಗೆ, ಶ್ರೀಲಂಕಾ ನೌಕಾಪಡೆಯು 2024ರಲ್ಲಿ ಒಟ್ಟು 18 ಭಾರತೀಯ ದೋಣಿಗಳನ್ನು ವಶಪಡಿಸಿಕೊಂಡಿದ್ದು, ಶ್ರೀಲಂಕಾದ ಸಮುದ್ರದಿಂದ 146 ಭಾರತೀಯ ಮೀನುಗಾರರನ್ನು ಬಂಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT