ಹಣ ವಶಕ್ಕೆ (ಸಂಗ್ರಹ ಚಿತ್ರ) Online desk
ದೇಶ

ಈರೋಡ್ ನಲ್ಲಿ 3 ಲಕ್ಷ ರೂಪಾಯಿ ವಶಕ್ಕೆ ಪಡೆದ ತಮಿಳುನಾಡು ಪೊಲೀಸರು

ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದ್ದು, ನೀತಿ ಸಂಹಿತೆ ಜಾರಿಗೊಂಡಿದೆ. ಈ ಹಂತದಲ್ಲಿ ತಮಿಳುನಾಡು ಪೊಲೀಸರು ಈರೋಡ್ ನಲ್ಲಿ 3 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ಈರೋಡ್: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದ್ದು, ನೀತಿ ಸಂಹಿತೆ ಜಾರಿಗೊಂಡಿದೆ. ಈ ಹಂತದಲ್ಲಿ ತಮಿಳುನಾಡು ಪೊಲೀಸರು ಈರೋಡ್ ನಲ್ಲಿ 3 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ. ರಿಟರ್ನಿಂಗ್ ಆಫೀಸರ್, ಈರೋಡ್ ಜಿಲ್ಲಾಧಿಕಾರಿ, ರಾಜ್ ಗೋಪಾಲ್ ಸುನ್ಕರ ನೇತೃತ್ವದಲ್ಲಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಬೆಳಿಗ್ಗೆ ವೆಟ್ಟು ಕಟ್ಟು ವಲಸು ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಅಧಿಕಾರಿಗಳು ದ್ವಿಚಕ್ರವಾಹನ ಸವಾರನೋರ್ವನನ್ನು ತಡೆದು ಆತನ ಬಳಿ ಇದ್ದ 3 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಮೊತ್ತಕ್ಕೆ ಸೂಕ್ತ ದಾಖಲೆಗಳಿಲ್ಲದ ಕಾರಣ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡು ಈರೋಡ್ ಜಿಲ್ಲೆಯ ವಡಿವೇಲು ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅದೇ ರೀತಿ ಇಲ್ಲಿನ ರೈಲ್ವೇ ನಿಲ್ದಾಣದಲ್ಲಿ ಇಬ್ಬರು ವ್ಯಾಪಾರಿಗಳು ಬಟ್ಟೆಗಳನ್ನು ಹೊಂದಿರುವ ಬಂಡಲ್ ಮತ್ತು ಖರೀದಿಗೆ ಸರಿಯಾದ ದಾಖಲೆಗಳನ್ನು ಹೊಂದಿರದಿರುವುದನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ ಪತ್ತೆ ಮಾಡಿದೆ. ಬಟ್ಟೆಗಳನ್ನು ತಂಡ ವಶಪಡಿಸಿಕೊಂಡಿದೆ. ನಂತರ ವ್ಯಾಪಾರಿಗಳು ಬಿಲ್‌ಗಳನ್ನು ಸಲ್ಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT