ಎಂಕೆ ಸ್ಟಾಲಿನ್ - ಸೆಲ್ವಪೆರುಂತಗೈ 
ದೇಶ

ಲೋಕಸಭಾ ಚುನಾವಣೆ: ತಮಿಳುನಾಡಿನ 9 ಸ್ಥಾನಗಳಲ್ಲಿ ಕಾಂಗ್ರೆಸ್, 21ರಲ್ಲಿ ಡಿಎಂಕೆ ಸ್ಪರ್ಧೆ

ಸುದೀರ್ಘ ಮಾತುಕತೆ ನಂತರ, ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟದ ಅಡಿಯಲ್ಲಿ ಕಾಂಗ್ರೆಸ್ ಸ್ಪರ್ಧಿಸುವ ಕ್ಷೇತ್ರಗಳನ್ನು ಸೋಮವಾರ ಕೊನೆಗೂ ಅಂತಿಮಗೊಳಿಸಲಾಗಿದೆ.

ಚೆನ್ನೈ: ಸುದೀರ್ಘ ಮಾತುಕತೆ ನಂತರ, ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟದ ಅಡಿಯಲ್ಲಿ ಕಾಂಗ್ರೆಸ್ ಸ್ಪರ್ಧಿಸುವ ಕ್ಷೇತ್ರಗಳನ್ನು ಸೋಮವಾರ ಕೊನೆಗೂ ಅಂತಿಮಗೊಳಿಸಲಾಗಿದೆ. 39 ಲೋಕಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ ತಮಿಳುನಾಡಿನ 9 ಮತ್ತು ಪುದುಚೇರಿಯಲ್ಲಿ 1 ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ ಮತ್ತು ಆಡಳಿತರೂಢ ಡಿಎಂಕೆ 21 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಇಂದು ಡಿಎಂಕೆ ಕೇಂದ್ರ ಕಚೇರಿಯಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ ಸೆಲ್ವಪೆರುಂತಗೈ ಅವರು ಸಹಿ ಹಾಕಲಾದ ಒಪ್ಪಂದದ ಪ್ರಕಾರ, 2019 ರಲ್ಲಿ ತಮಿಳುನಾಡಿನಲ್ಲಿ ಸ್ಪರ್ಧಿಸಿದ್ದ ಒಂಬತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆರು ಕ್ಷೇತ್ರಗಳನ್ನು ಮರಳಿ ಪಡೆದಿದೆ. ಕಾಂಗ್ರೆಸ್ ತಿರುವಳ್ಳೂರು(ಎಸ್‌ಸಿ), ಶಿವಗಂಗಾ, ಕೃಷ್ಣಗಿರಿ, ಕರೂರ್, ವಿರುದುನಗರ ಮತ್ತು ಕನ್ಯಾಕುಮಾರಿಯಲ್ಲಿ ಮತ್ತೆ ಸ್ಪರ್ಧಿಸಲಿದೆ.

2019 ರಲ್ಲಿ ಗೆದ್ದ ಪುದುಚೇರಿ ಕ್ಷೇತ್ರ ಸೇರಿದಂತೆ ಮೂರು ಹೊಸ ಸ್ಥಾನಗಳನ್ನು ಪಕ್ಷಕ್ಕೆ ನೀಡಲಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಡಲೂರು, ಮೈಲಾಡುತುರೈ ಮತ್ತು ತಿರುನಲ್ವೇಲಿಯಿಂದ ಸ್ಪರ್ಧಿಸಲಿದೆ.

ಡಿಎಂಕೆ ಕಳೆದ ಬಾರಿ ಗೆದ್ದಿದ್ದ ಕಡಲೂರು ಮತ್ತು ತಿರುನಲ್ವೇಲಿಯನ್ನು ಈ ಬಾರಿ ಕಾಂಗ್ರೆಸ್‌ಗೆ ಹಂಚಿಕೆ ಮಾಡಿದೆ. ಕಡಲೂರಿನ ಹಾಲಿ ಡಿಎಂಕೆ ಸಂಸದ ಟಿಆರ್‌ವಿಎಸ್ ರಮೇಶ್ ಕೊಲೆ ಪ್ರಕರಣ ಎದುರಿಸುತ್ತಿದ್ದುದನ್ನು ಇಲ್ಲಿ ಸ್ಮರಿಸಬಹುದು. ತಿರುನಲ್ವೇಲಿಯ ಡಿಎಂಕೆ ಸಂಸದ ಎಸ್.ಜ್ಞಾನತಿರವಿಯಂ ಕೂಡ ಹಲವು ಆರೋಪಗಳನ್ನು ಎದುರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT