ಸುಪ್ರೀಂಕೋರ್ಟ್ 
ದೇಶ

Electoral Bonds: ಇದಿಷ್ಟೇ ಸಾಲದು, ಎಲ್ಲ ಮಾಹಿತಿ ಬೇಕು.. ವಿವರ ಬಹಿರಂಗದಲ್ಲೂ selective ಆಗದಿರಿ; SBI ಗೆ 'ಸುಪ್ರೀಂ' ಚಾಟಿ!

ಚುನಾವಣಾ ಬಾಂಡ್ ಮಾಹಿತಿ ಬಹಿರಂಗ ವಿಚಾರವಾಗಿ ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದ್ದು, ವಿವರ ಕೇಳಿದ್ದ ಸರ್ವೋಚ್ಛ ನ್ಯಾಯಾಲಯ ವಿವರ ಬಹಿರಂಗದಲ್ಲೂ selective ಆಗದಿರಿ.. ಎಲ್ಲ ಮಾಹಿತಿ ಬೇಕು ಎಂದು ಚಾಟಿ ಬೀಸಿದೆ.

ನವದೆಹಲಿ: ಚುನಾವಣಾ ಬಾಂಡ್ ಮಾಹಿತಿ ಬಹಿರಂಗ ವಿಚಾರವಾಗಿ ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದ್ದು, ವಿವರ ಕೇಳಿದ್ದ ಸರ್ವೋಚ್ಛ ನ್ಯಾಯಾಲಯ ವಿವರ ಬಹಿರಂಗದಲ್ಲೂ selective ಆಗದಿರಿ.. ಎಲ್ಲ ಮಾಹಿತಿ ಬೇಕು ಎಂದು ಚಾಟಿ ಬೀಸಿದೆ.

ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡುವ ಚುನಾವಣಾ ಬಾಂಡ್‌ಗಳ (Electoral Bonds) ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸ್ಟೇಟ್‌ ಬ್ಯಾಂಕ್‌ಗೆ (SBI) ಮತ್ತೆ ಹಿನ್ನಡೆಯಾಗಿದ್ದು, ಚುನಾವಣಾ ಬಾಂಡ್‌ಗಳ ಯುನಿಕ್‌ ನಂಬರ್‌ (Unique Number) ಸೇರಿ ಎಲ್ಲ ಮಾಹಿತಿಯನ್ನೂ ಎಸ್‌ಬಿಐ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‌ (Supreme Court) ಸೋಮವಾರ ಆದೇಶಿಸಿದೆ.

ಚುನಾವಣಾ ಬಾಂಡ್ ಗಳ ಕುರಿತು ಎಲ್ಲ ಮಾಹಿತಿಯನ್ನು ಎಸ್‌ಬಿಐ ಒದಗಿಸಬೇಕು. ಆದರೆ ಎಸ್ ಬಿಐ ಕೆಲ ನಿಯಮಿತ ಮಾಹಿತಿಗಳನ್ನಷ್ಟೇ ಒದಗಿಸಿದೆ. ಆದರೆ, ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿ ಇರುವ ಅಫಿಡವಿಟ್‌ ಅನ್ನು ಎಸ್‌ಬಿಐ ಕೋರ್ಟ್ ಗೆ ನೀಡಬೇಕು. ಆಯ್ಕೆ ಮಾಡಲಾದ ಮಾಹಿತಿಯನ್ನಷ್ಟೇ ನೀಡಿದರೆ ಆಗುವುದಿಲ್ಲ. ಯುನಿಕ್‌ ನಂಬರ್‌ ಸೇರಿ ಸಮಗ್ರ ಮಾಹಿತಿಯನ್ನು ಒದಗಿಸಬೇಕು. ಇದುವರೆಗೆ ಚುನಾವಣೆ ಆಯೋಗಕ್ಕೆ ಎಸ್‌ಬಿಐ ಎರಡು ಪಟ್ಟಿ ನೀಡಿದೆ. ಈಗ ಎಲ್ಲ ಮಾಹಿತಿ ಒದಗಿಸಬೇಕು ಎಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಏನಿದು ಯುನಿಕ್‌ ನಂಬರ್?‌

ಚುನಾವಣಾ ಬಾಂಡ್‌ಗಳಿಗೆ ವಿಶೇಷ ಗುರುತಿನ ಸಂಖ್ಯೆ ಇರುತ್ತದೆ. ಇದನ್ನೇ ಯುನಿಕ್‌ ನಂಬರ್‌ (Unique Number) ಎನ್ನಲಾಗುತ್ತದೆ. ಈ ಯುನಿಕ್‌ ನಂಬರ್‌ನಿಂದ ಬಾಂಡ್‌ ಖರೀದಿಸಿದ ದೇಣಿಗೆದಾರರು, ಅವರು ನೀಡಿದ ಮೊತ್ತ ಹಾಗೂ ರಾಜಕೀಯ ಪಕ್ಷಗಳು ಸ್ವೀಕರಿಸಿದ ಹಣದ ಬಗ್ಗೆ ನಿಖರ ಮಾಹಿತಿ ದೊರೆಯುತ್ತದೆ. ಇದೇ ಕಾರಣಕ್ಕಾಗಿಯೇ ಎಸ್‌ಬಿಐಗೆ ಯುನಿಕ್‌ ನಂಬರ್‌ ಸೇರಿ ಎಲ್ಲ ಮಾಹಿತಿ ಒದಗಿಸಬೇಕು ಸುಪ್ರೀಂ ಕೋರ್ಟ್‌ ಅದೇಶಿಸಿದೆ ಎಂದು ತಜ್ಞರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT