ರಾಜ್ಯಪಾಲ ಆರ್.ಎನ್.ರವಿ 
ದೇಶ

ಸಚಿವರಾಗಿ ಪೊನ್ಮುಡಿ ನೇಮಿಸಲು ರಾಜ್ಯಪಾಲ ಆರ್.ಎನ್.ರವಿ ನಿರಾಕರಣೆ; 'ಸುಪ್ರೀಂ' ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ರಾಜ್ಯಪಾಲರು ಇತ್ತೀಚೆಗೆ ಡಿಎಂಕೆ ಹಿರಿಯ ನಾಯಕ ಮತ್ತು ಮಾಜಿ ಉನ್ನತ ಶಿಕ್ಷಣ ಸಚಿವರ ಪೊನ್ಮುಡಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ನಿರಾಕರಿಸಿದ್ದರು.

ನವದೆಹಲಿ: ಡಿಎಂಕೆಯ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಶಿಫಾರಸಿನಂತೆ ಸಚಿವರನ್ನಾಗಿ ನೇಮಿಸಲು ರಾಜ್ಯಪಾಲ ಆರ್‌ಎನ್‌ ರವಿ ಅವರು ನಿರಾಕರಿಸಿದ್ದು, ಇದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಸಮ್ಮತಿಸಿದೆ.

ರಾಜ್ಯಪಾಲರು ಇತ್ತೀಚೆಗೆ ಡಿಎಂಕೆ ಹಿರಿಯ ನಾಯಕ ಮತ್ತು ಮಾಜಿ ಉನ್ನತ ಶಿಕ್ಷಣ ಸಚಿವರ ಪೊನ್ಮುಡಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ನಿರಾಕರಿಸಿದ್ದರು ಮತ್ತು ಇದು ಸಾಂವಿಧಾನಿಕ ನೈತಿಕತೆಗೆ ವಿರುದ್ಧವಾಗಿದೆ ಎಂದು ಹೇಳಿದ್ದರು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ತಮಿಳುನಾಡು ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರ ಮನವಿಯನ್ನು ಪರಿಗಣಿಸಿದ್ದು, ಈ ವಿಷಯದಲ್ಲಿ ಸ್ವಲ್ಪ ತುರ್ತುಸ್ಥಿತಿಯಿದ್ದು, ಅದನ್ನು ವಿಚಾರಣೆಗೆ ಪಟ್ಟಿ ಮಾಡಬೇಕು ಎಂದು ಹೇಳಿದ್ದಾರೆ.

“ದಯವಿಟ್ಟು ಈ ಕುರಿತ ವಿವರಣೆಯನ್ನು ನನಗೆ ಇಮೇಲ್ ಮೂಲಕ ಕಳುಹಿಸಿ. ನಾನು ಇಮೇಲ್ ಅನ್ನು ಪರಿಶೀಲಿಸುತ್ತೇನೆ ಎಂದು ಸಿಜೆಐ, ಸಿಂಘ್ವಿಗೆ ಹೇಳಿದರು.

ಪೊನ್ಮುಡಿ ನೇಮಕ ಕುರಿತು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಅವರಿಗೆ ಪತ್ರ ಬರೆದಿದ್ದ ರಾಜ್ಯಪಾಲರು, ಪೊನ್ಮುಡಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್, ಪೊನ್ಮುಡಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಮಧ್ಯಂತರ ಆದೇಶ ನೀಡಿದೆಯಷ್ಟೇ ಎಂದು ಹೇಳಿದ್ದರು.

ಇತ್ತೀಚೆಗೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪೊನ್ಮುಡಿ ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ ಅವರನ್ನು ಸಚಿವರನ್ನಾಗಿ ನೇಮಕ ಮಾಡುವಂತೆ ತಮಿಳುನಾಡು ಸಿಎಂ ಶಿಫಾರಸು ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT