ತಮಿಳ್​ಇಸಯ್ ಸೌಂದರ್ ರಾಜನ್ ರಾಜೀನಾಮೆ 
ದೇಶ

Tamilisai Soundararajan: ತೆಲಂಗಾಣ, ಪುದುಚೇರಿ ರಾಜ್ಯಪಾಲೆ ತಮಿಳ್​ಇಸಯ್ ಸೌಂದರ್ ರಾಜನ್ ರಾಜೀನಾಮೆ; ಲೋಕಸಭೆಗೆ ಸ್ಪರ್ಧೆ?

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲರಾದ ತಮಿಳ್​ಇಸಯ್ ಸೌಂದರರಾಜನ್(Tamilisai Soudararajan) ರಾಜೀನಾಮೆ ನೀಡಿದ್ದಾರೆ.

ಹೈದರಾಬಾದ್: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲರಾದ ತಮಿಳ್​ಇಸಯ್ ಸೌಂದರ್ ರಾಜನ್(Tamilisai Soudararajan) ರಾಜೀನಾಮೆ ನೀಡಿದ್ದಾರೆ.

ತಮಿಳ್​ಇಸಯ್ ಸೌಂದರರಾಜನ್ ಅವರು ದೆಹಲಿಯಲ್ಲಿ ರಾಜೀನಾಮೆ ಸಲ್ಲಿಸಿದರು ಮತ್ತು ಸೋಮವಾರ ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಸ್ವತಃ ಪುದುಚೇರಿ ರಾಜಭವನ ಕೂಡ ತಮಿಳ್​ಇಸಯ್ ಸೌಂದರ್ ರಾಜನ್ ಅವರ ರಾಜಿನಾಮೆ ವಿಚಾರವನ್ನು ಸ್ಪಷ್ಟಪಡಿಸಿದೆ.

ಸಕ್ರಿಯ ರಾಜಕಾರಣಕ್ಕೆ ತಮಿಳ್​ಇಸಯ್ ಸೌಂದರರಾಜನ್

ಇನ್ನು ಕೆಲವು ದಿನಗಳ ಹಿಂದೆ ತಮಿಳ್​ಇಸಯ್ ಸೌಂದರ್ ರಾಜನ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕತ್ವದಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ. ಲೋಕಸಭೆ ಚುನಾವಣೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌಂದರ್ ರಾಜನ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅವರು ಉತ್ತರ ತಮಿಳುನಾಡು, ಪುದುಚೇರಿ ಅಥವಾ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.

ಅಂದಹಾಗೆ ಪುದುಚೇರಿಯಲ್ಲಿ ಎನ್​ಆರ್​ ಕಾಂಗ್ರೆಸ್​-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT