ಜ್ಞಾನವಾಪಿ ಪ್ರಕರಣ 
ದೇಶ

ಜ್ಞಾನವಾಪಿ ಮಸೀದಿ ನೆಲಮಾಳಿಗೆ ಪ್ರಕರಣ: ಏಪ್ರಿಲ್ 11ಕ್ಕೆ ವಿಚಾರಣೆ

ವಿವಾದಿತ ಜ್ಞಾನವಾಪಿ ಮಸೀದಿಯ ನೆಲಮಾಳಿಗೆ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 11ರಂದು ನಡೆಸುವುದಾಗಿ ವಾರಣಾಸಿ ಕೋರ್ಟ್ ಮಂಗವಾರ ಹೇಳಿದೆ.

ವಾರಣಾಸಿ: ವಿವಾದಿತ ಜ್ಞಾನವಾಪಿ ಮಸೀದಿಯ ನೆಲಮಾಳಿಗೆ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 11ರಂದು ನಡೆಸುವುದಾಗಿ ವಾರಣಾಸಿ ಕೋರ್ಟ್ ಮಂಗವಾರ ಹೇಳಿದೆ.

ವಾರಣಾಸಿ ಜಿಲ್ಲಾ ನ್ಯಾಯಾಲಯವು ಇತ್ತೀಚಿಗೆ ಹಿಂದೂ ಪ್ರಾರ್ಥನೆಗೆ ಅನುಮತಿ ನೀಡಿದ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯ ಮೇಲೆ ಮುಸ್ಲಿಂ ಭಕ್ತರು ನಡೆಯುವುದನ್ನು ತಡೆಯುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 11 ರಂದು ನಿಗದಿಪಡಿಸಿದೆ.

ಹಿಂದೂ ಪರ ವಕೀಲ ಮದನ್ ಮೋಹನ್ ಯಾದವ್ ಈ ಬಗ್ಗೆ ಮಾಹಿತಿ ನೀಡಿದ್ದು, ಮುಸ್ಲಿಂ ಕಡೆಯವರು ರಂಜಾನ್ ತಿಂಗಳಾಗಿರುವುದರಿಂದ ಉಪವಾಸ ಮಾಡುತ್ತಿದ್ದೇವೆ ಎಂದು ಮಂಗಳವಾರ ಜಿಲ್ಲಾ ಉಸ್ತುವಾರಿ ನ್ಯಾಯಾಧೀಶ ಅನಿಲ್ ಕುಮಾರ್ ಅವರ ನ್ಯಾಯಾಲಯಕ್ಕೆ ತಿಳಿಸಿದರು. ಹೀಗಾಗಿ ಅವರ ಪರ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದರು.ಈ ಕುರಿತು ನ್ಯಾಯಾಲಯವು ಏಪ್ರಿಲ್ 11 ರಂದು ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ ಎಂದು ಅವರು ಹೇಳಿದರು.

ಸೆಲ್ಲಾರ್‌ನ ಮೇಲ್ಛಾವಣಿ ತುಂಬಾ ಹಳೆಯದು ಮತ್ತು ದುರ್ಬಲವಾಗಿದೆ ಎಂದು ಹಿಂದೂ ಕಡೆಯವರು ಸಲ್ಲಿಸಿರುವ ಮನವಿಯಲ್ಲಿ ತಿಳಿಸಲಾಗಿದೆ. 'ವ್ಯಾಸ್ ತೆಹ್ಖಾನಾ' ಎಂದೂ ಕರೆಯಲ್ಪಡುವ ಈ ನೆಲಮಾಳಿಗೆಯ ಕಂಬಗಳಿಗೆ ದುರಸ್ತಿ ಅಗತ್ಯವಿದೆ ಎಂದು ಅದು ಹೇಳಿದೆ.

ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯ ಮನವಿಯನ್ನು ವಜಾಗೊಳಿಸುವಾಗ, ಜ್ಞಾನವಾಪಿ ಮಸೀದಿಯ 'ವ್ಯಾಸ್ ತೆಹ್ಖಾನಾ'ದಲ್ಲಿ ಹಿಂದೂ ಪ್ರಾರ್ಥನೆಗಳು ಮುಂದುವರಿಯುತ್ತವೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದ, ಕೆಲವು ದಿನಗಳ ನಂತರ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!