ಜ್ಞಾನವಾಪಿ ಪ್ರಕರಣ 
ದೇಶ

ಜ್ಞಾನವಾಪಿ ಮಸೀದಿ ನೆಲಮಾಳಿಗೆ ಪ್ರಕರಣ: ಏಪ್ರಿಲ್ 11ಕ್ಕೆ ವಿಚಾರಣೆ

ವಿವಾದಿತ ಜ್ಞಾನವಾಪಿ ಮಸೀದಿಯ ನೆಲಮಾಳಿಗೆ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 11ರಂದು ನಡೆಸುವುದಾಗಿ ವಾರಣಾಸಿ ಕೋರ್ಟ್ ಮಂಗವಾರ ಹೇಳಿದೆ.

ವಾರಣಾಸಿ: ವಿವಾದಿತ ಜ್ಞಾನವಾಪಿ ಮಸೀದಿಯ ನೆಲಮಾಳಿಗೆ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 11ರಂದು ನಡೆಸುವುದಾಗಿ ವಾರಣಾಸಿ ಕೋರ್ಟ್ ಮಂಗವಾರ ಹೇಳಿದೆ.

ವಾರಣಾಸಿ ಜಿಲ್ಲಾ ನ್ಯಾಯಾಲಯವು ಇತ್ತೀಚಿಗೆ ಹಿಂದೂ ಪ್ರಾರ್ಥನೆಗೆ ಅನುಮತಿ ನೀಡಿದ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯ ಮೇಲೆ ಮುಸ್ಲಿಂ ಭಕ್ತರು ನಡೆಯುವುದನ್ನು ತಡೆಯುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 11 ರಂದು ನಿಗದಿಪಡಿಸಿದೆ.

ಹಿಂದೂ ಪರ ವಕೀಲ ಮದನ್ ಮೋಹನ್ ಯಾದವ್ ಈ ಬಗ್ಗೆ ಮಾಹಿತಿ ನೀಡಿದ್ದು, ಮುಸ್ಲಿಂ ಕಡೆಯವರು ರಂಜಾನ್ ತಿಂಗಳಾಗಿರುವುದರಿಂದ ಉಪವಾಸ ಮಾಡುತ್ತಿದ್ದೇವೆ ಎಂದು ಮಂಗಳವಾರ ಜಿಲ್ಲಾ ಉಸ್ತುವಾರಿ ನ್ಯಾಯಾಧೀಶ ಅನಿಲ್ ಕುಮಾರ್ ಅವರ ನ್ಯಾಯಾಲಯಕ್ಕೆ ತಿಳಿಸಿದರು. ಹೀಗಾಗಿ ಅವರ ಪರ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದರು.ಈ ಕುರಿತು ನ್ಯಾಯಾಲಯವು ಏಪ್ರಿಲ್ 11 ರಂದು ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ ಎಂದು ಅವರು ಹೇಳಿದರು.

ಸೆಲ್ಲಾರ್‌ನ ಮೇಲ್ಛಾವಣಿ ತುಂಬಾ ಹಳೆಯದು ಮತ್ತು ದುರ್ಬಲವಾಗಿದೆ ಎಂದು ಹಿಂದೂ ಕಡೆಯವರು ಸಲ್ಲಿಸಿರುವ ಮನವಿಯಲ್ಲಿ ತಿಳಿಸಲಾಗಿದೆ. 'ವ್ಯಾಸ್ ತೆಹ್ಖಾನಾ' ಎಂದೂ ಕರೆಯಲ್ಪಡುವ ಈ ನೆಲಮಾಳಿಗೆಯ ಕಂಬಗಳಿಗೆ ದುರಸ್ತಿ ಅಗತ್ಯವಿದೆ ಎಂದು ಅದು ಹೇಳಿದೆ.

ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯ ಮನವಿಯನ್ನು ವಜಾಗೊಳಿಸುವಾಗ, ಜ್ಞಾನವಾಪಿ ಮಸೀದಿಯ 'ವ್ಯಾಸ್ ತೆಹ್ಖಾನಾ'ದಲ್ಲಿ ಹಿಂದೂ ಪ್ರಾರ್ಥನೆಗಳು ಮುಂದುವರಿಯುತ್ತವೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದ, ಕೆಲವು ದಿನಗಳ ನಂತರ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT