ರಣಧೀರ್ ಜೈಸ್ವಾಲ್  
ದೇಶ

ಅರುಣಾಚಲದ ಮೇಲೆ ಚೀನಾದ ಹಕ್ಕು ಅಸಂಬದ್ಧ; ಭಾರತ ಖಂಡಿಸುತ್ತದೆ, ಅದು ನಮ್ಮ ಅವಿಭಾಜ್ಯ ಅಂಗ: MEA

ರುಣಾಚಲ ಪ್ರದೇಶದ ಮೇಲೆ ಚೀನಾದ ಅಸಂಬದ್ಧ ಹಕ್ಕನ್ನು ಭಾರತ ಖಂಡಿಸುತ್ತದೆ. ಅದು ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ನವದೆಹಲಿ: ಅರುಣಾಚಲ ಪ್ರದೇಶದ ಮೇಲೆ ಚೀನಾದ ಅಸಂಬದ್ಧ ಹಕ್ಕನ್ನು ಭಾರತ ಖಂಡಿಸುತ್ತದೆ. ಅದು ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ಹೇಳಿದೆ.

ಚೀನಾ ರಕ್ಷಣಾ ಸಚಿವಾಲಯದ ವಕ್ತಾರರು ಅಸಂಬದ್ಧ ಹಕ್ಕನ್ನು ಪ್ರತಿಪಾದಿಸಿರುವುದನ್ನು ಗಮನಿಸಿದ್ದೇವೆ. ಇದನ್ನು ಭಾರತ ಖಂಡಿಸುತ್ತದೆ ಮತ್ತು ಅರುಣಾಚಲ ಪ್ರದೇಶ ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಮತ್ತು ಬೇರ್ಪಡಿಸಲಾಗದ ಭಾಗ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದ ಮೇಲೆ ಚೀನಾ ಸೇನೆಯು ತನ್ನ ಹಕ್ಕನ್ನು ಪುನರುಚ್ಚರಿಸಿದ ಕೆಲವು ದಿನಗಳ ನಂತರ ಎಂಇಎ ಈ ಪ್ರತಿಕ್ರಿಯೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತಿಚೀಗೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಬೀಜಿಂಗ್‌ ಆಕ್ಷೇಪ ವ್ಯಕ್ತಪಡಿಸಿತ್ತು ಮತ್ತು ಇದರ ಬೆನ್ನಲ್ಲೇ ಈ ಪ್ರದೇಶ "ಚೀನಾ ಭೂಪ್ರದೇಶದ ಅಂತರ್ಗತ ಭಾಗ" ಎಂದು ಕರೆದಿತ್ತು.

ಅರುಣಾಚಲ ಪ್ರದೇಶಕ್ಕೆ ಸಂಬಂಧಿಸಿದಂತೆ ಚೀನಾದ ರಕ್ಷಣಾ ಸಚಿವಾಲಯದ ವಕ್ತಾರರು ನೀಡಿದ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ MEA ಈ ಪ್ರಕಟಣೆ ನೀಡಿದೆ.

"ಈ ವಿಷಯದಲ್ಲಿ ಆಧಾರರಹಿತ ವಾದಗಳನ್ನು ಪುನರಾವರ್ತಿಸುವುದಕ್ಕೆ ಯಾವುದೇ ಮಾನ್ಯತೆಯನ್ನು ನೀಡುವುದಿಲ್ಲ. ಅರುಣಾಚಲ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಅಂಗ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಅದರ ಜನರು ನಮ್ಮ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಮೂಲಸೌಕರ್ಯ ಯೋಜನೆಗಳಿಂದ ಪ್ರಯೋಜನ ಪಡೆಯುವುದನ್ನು ಮುಂದುವರಿಸುತ್ತಾರೆ" ಎಂದು ಎಂಇಎ ತಿಳಿಸಿದೆ.

ಚೀನಾದ ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ಜಾಂಗ್ ಕ್ಸಿಯೋಗಾಂಗ್ ಅವರು, ಝಾಂಗ್ನಾನ್ ನ ದಕ್ಷಿಣ ಭಾಗ (ಟಿಬೆಟ್‌ ಗೆ ಚೀನಾ ಇಟ್ಟಿರುವ ಹೆಸರು) ಚೀನಾದ ಭೂಪ್ರದೇಶದ ಅನಿಭಾಜ್ಯ ಅಂಗ. ಇದನ್ನು ಭಾರತ ಅಕ್ರಮವಾಗಿ ತನ್ನದು ಎಂದು ಹೇಳುತ್ತಿದೆ. ಇದನ್ನು ಚೀನಾ ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಮತ್ತು ಬಲವಾಗಿ ವಿರೋಧಿಸುತ್ತದೆ" ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT