ಪಶುಪತಿ ಕುಮಾರ್ ಪಾರಸ್ 
ದೇಶ

ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪಾರಸ್ ರಾಜೀನಾಮೆ!

ಬಿಜೆಪಿ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಪಶುಪತಿ ಕುಮಾರ್ ಪಾರಸ್ ಕೇಂದ್ರ ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಅಸಮಾಧಾನದಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ನವದೆಹಲಿ: ಬಿಜೆಪಿ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಪಶುಪತಿ ಕುಮಾರ್ ಪಾರಸ್ ಕೇಂದ್ರ ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಅಸಮಾಧಾನದಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪಶುಪತಿ ಪಾರಸ್ ಅವರ ಸೋದರಳಿಯ ಚಿರಾಗ್ ಪಾಸ್ವಾನ್ ಅವರೊಂದಿಗೆ ಬಿಜೆಪಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆಯಾಗಿದೆ.

ಪ್ರಧಾನ ನರೇಂದ್ರ ಮೋದಿ ದೊಡ್ಡ ನಾಯಕರು. ಆದರೆ ನನಗೆ ಮತ್ತು ನನ್ನ ಪಕ್ಷಕ್ಕೆ ಅನ್ಯಾಯವಾಗಿದೆ ಎಂದು ಪಾರಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷವು ಐದು ಮಂದಿ ಸಂಸದರನ್ನು ಹೊಂದಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಹೀಗಿದ್ದೂ ನಮಗೆ ಅನ್ಯಾಯವೆಸಗಲಾಗಿದೆ. ಹೀಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಸೀಟು ಹಂಚಿಕೆಯಲ್ಲಿ ಚಿರಾಗ್ ಪಾಸ್ವಾನ್ ಅವರ ಎಲ್​ಜೆಪಿ(ರಾಮ್​ ವಿಲಾಸ್) 5 ಲೋಕಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುವ ಅವಕಾಶ ಪಡೆದಿದ್ದಕ್ಕಾಗಿ ಪಶುಪತಿ ಕೋಪಗೊಂಡಿದ್ದಾರೆ ಎನ್ನಲಾಗಿದೆ. ಸೀಟು ಹಂಚಿಕೆ ಘೋಷಣೆಗೂ ಮುನ್ನ ನಮ್ಮ ಜತೆ ಮಾತನಾಡಿಲ್ಲ ಎಂದು ಪಶುಪತಿ ಪಾರಸ್ ಹೇಳಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್ ಅವರ ಸಹೋದರ ಪಶುಪತಿ ಪಾರಸ್ ಅವರು ಹಾಜಿಪುರದ ಹಾಲಿ ಸಂಸದರಾಗಿದ್ದು, ಕೇಂದ್ರ ಆಹಾರ ಸಂಸ್ಕರಣಾ ಖಾತೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಈ ಬಾರಿ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಕಾರಣ ಪಶುಪತಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ