ನರೇಂದ್ರ ಮೋದಿ Online desk
ದೇಶ

ಪುಟಿನ್ ಜೊತೆ ಮಾತುಕತೆ ಬಳಿಕ ಝೆಲೆನ್ಸ್ಕಿಗೆ ಕರೆ; ರಷ್ಯಾ-ಯುಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಬೆಂಬಲ!

ಪ್ರಧಾನಿ ನರೇಂದ್ರ ಮೋದಿ ಯುಕ್ರೇನ್ ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಗೆ ಕರೆ ಮಾಡಿ ಮಾತನಾಡಿದ್ದು, ಭಾರತ ರಷ್ಯಾ-ಯುಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ನಡೆಯುತ್ತಿರುವ ಎಲ್ಲಾ ಪ್ರಯತ್ನಗಳನ್ನೂ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಯುಕ್ರೇನ್ ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಗೆ ಕರೆ ಮಾಡಿ ಮಾತನಾಡಿದ್ದು, ಭಾರತ ರಷ್ಯಾ-ಯುಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ನಡೆಯುತ್ತಿರುವ ಎಲ್ಲಾ ಪ್ರಯತ್ನಗಳನ್ನೂ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ದೂರವಾಣಿ ಕರೆಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಜನಕೇಂದ್ರಿತ ವಿಧಾನವನ್ನು ಪುನರುಚ್ಚರಿಸಿದರು ಮತ್ತು ಮುಂದಿನ ಮಾರ್ಗವಾಗಿ ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದಕ್ಕೆ ಕರೆ ನೀಡಿದರು. ಪ್ರಧಾನಿ ಮೋದಿ ಈ ಹಿಂದೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೂ ಸಹ ಭಾರತದ ಈ ನಿಲುವನ್ನು ತಿಳಿಸಿದ್ದರು.

"ಭಾರತ-ಉಕ್ರೇನ್ ಪಾಲುದಾರಿಕೆಯನ್ನು ಬಲಪಡಿಸುವ ಕುರಿತು ಅಧ್ಯಕ್ಷ @ZelenskyyUa ಅವರೊಂದಿಗೆ ಉತ್ತಮ ಸಂವಾದವನ್ನು ನಡೆಸಿದೆ. ಶಾಂತಿಗಾಗಿ ಎಲ್ಲಾ ಪ್ರಯತ್ನಗಳಿಗೆ ಮತ್ತು ನಡೆಯುತ್ತಿರುವ ಸಂಘರ್ಷಕ್ಕೆ ಶೀಘ್ರ ಅಂತ್ಯವನ್ನು ತರಲು ಭಾರತದ ನಿರಂತರ ಬೆಂಬಲವನ್ನು ತಿಳಿಸಿದೆ. ನಮ್ಮ ಜನಕೇಂದ್ರಿತ ವಿಧಾನದಿಂದ ಮಾರ್ಗದರ್ಶಿಸಲ್ಪಟ್ಟ ಮಾನವೀಯ ಸಹಾಯವನ್ನು ಭಾರತವು ಮುಂದುವರಿಸುತ್ತದೆ" ಎಂದು ಮೋದಿ ಟ್ವಿಟರ್ ನಲ್ಲಿ ಹೇಳಿದ್ದಾರೆ.

ಅವರು ಬುಧವಾರ ಪುಟಿನ್ ಅವರೊಂದಿಗೆ ಮಾತನಾಡಿದರು ಮತ್ತು ರಷ್ಯಾ ಅಧ್ಯಕ್ಷರಾಗಿ ಪುನರಾಯ್ಕೆಯಾದ ಅವರನ್ನು ಅಭಿನಂದಿಸಿದರು. ಉಭಯ ನಾಯಕರು ವಿವಿಧ ಕ್ಷೇತ್ರಗಳಲ್ಲಿ ತಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದಾಗ ಉಕ್ರೇನ್‌ನ ಜನರಿಗೆ ಭಾರತದ ನಿರಂತರ ಮಾನವೀಯ ಸಹಾಯವನ್ನು ಝೆಲೆನ್ಸ್ಕಿ ಶ್ಲಾಘಿಸಿದರು ಎಂದು ಹೇಳಿಕೆಯೊಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT