ಪ್ರಣಾಳಿಕೆ ಬಿಡುಗಡೆ 
ದೇಶ

ಲೋಕಸಭೆ ಚುನಾವಣೆ: ತಮಿಳುನಾಡಿನ 21 ಕ್ಷೇತ್ರಗಳಿಗೆ ಡಿಎಂಕೆ ಅಭ್ಯರ್ಥಿಗಳ ಘೋಷಣೆ, ಪ್ರಣಾಳಿಕೆ ಸಹ ಬಿಡುಗಡೆ

ಏಪ್ರಿಲ್ 19 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ 21 ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಚೆನ್ನೈ: ಏಪ್ರಿಲ್ 19 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ 21 ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ, ಹಾಲಿ ಸಂಸದರಾದ ಕನಿಮೋಳಿ, ಟಿಆರ್ ಬಾಲು ಮತ್ತು ಎ ರಾಜಾ ಅವರನ್ನು ಮತ್ತೆ ಕಣಕ್ಕಿಳಿಸಿದೆ.

ಇದು ಉಳಿದ 18 ಸ್ಥಾನಗಳನ್ನು ಡಿಎಂಕೆ ತನ್ನ ಮಿತ್ರಪಕ್ಷಗಳಾದ ಕಾಂಗ್ರೆಸ್, ಎಡ ಪಕ್ಷಗಳು ಮತ್ತು VCK ಗೆ ಹಂಚಿಕೆ ಮಾಡಿದೆ.

ಲೋಕಸಭೆ ಚುನಾವಣೆಗಾಗಿ ತನ್ನ ಪ್ರಣಾಳಿಕೆಯನ್ನು ಸಹ ಡಿಎಂಕೆ ಇಂದು ಬಿಡುಗಡೆ ಮಾಡಿದ್ದು, ರಾಜ್ಯಪಾಲರ ನೇಮಕಾತಿ ವೇಳೆ ರಾಜ್ಯಗಳ ಅಭಿಪ್ರಾಯ ಪಡೆಯಬೇಕು ಮತ್ತು 356ನೇ ವಿಧಿಯ ರದ್ದತಿಯಂತಹ ಇತರ ವಿಷಯಗಳನ್ನು ಪ್ರಸ್ತಾಪಿಸಿದೆ. ಅಲ್ಲದೆ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡುವ ಭರವಸೆಯನ್ನು ಸಹ ನೀಡಿದೆ.

ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ತಮಿಳುನಾಡು ಮತ್ತು ಪುದುಚೇರಿಯ ಎಲ್ಲಾ 40 ಲೋಕಸಭಾ ಸ್ಥಾನಗಳನ್ನು ಡಿಎಂಕೆ ನೇತೃತ್ವದ ಮೈತ್ರಿಕೂಟ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಕ್ಷಿಣ ಚೆನ್ನೈನ ಹಾಲಿ ಸಂಸದೆ ತಮಿಝಾಚಿ ತಂಗಪಾಂಡಿಯನ್ ಸೇರಿದಂತೆ ಮೂವರು ಮಹಿಳೆಯರನ್ನು ಆಡಳಿತ ಪಕ್ಷ ಡಿಎಂ ಕಣಕ್ಕಿಳಿಸಿದ್ದು, 11 ಹೊಸ ಮುಖಗಳಿಗೆ ಈ ಬಾರಿ ಅವಕಾಶ ನೀಡಿದೆ.

ದಯಾನಿಧಿ ಮಾರನ್, ಎಸ್ ಜಗತ್ರಕ್ಷಕನ್, ಕಲಾನಿಧಿ ವೀರಸಾಮಿ, ಕತಿರ್ ಆನಂದ್ ಮತ್ತು ಸಿ ಎನ್ ಅಣ್ಣಾದೊರೈ ಅವರನ್ನೂ ಉಳಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT