ಪ್ರಣಾಳಿಕೆ ಬಿಡುಗಡೆ 
ದೇಶ

ಲೋಕಸಭೆ ಚುನಾವಣೆ: ತಮಿಳುನಾಡಿನ 21 ಕ್ಷೇತ್ರಗಳಿಗೆ ಡಿಎಂಕೆ ಅಭ್ಯರ್ಥಿಗಳ ಘೋಷಣೆ, ಪ್ರಣಾಳಿಕೆ ಸಹ ಬಿಡುಗಡೆ

ಏಪ್ರಿಲ್ 19 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ 21 ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಚೆನ್ನೈ: ಏಪ್ರಿಲ್ 19 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ 21 ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ, ಹಾಲಿ ಸಂಸದರಾದ ಕನಿಮೋಳಿ, ಟಿಆರ್ ಬಾಲು ಮತ್ತು ಎ ರಾಜಾ ಅವರನ್ನು ಮತ್ತೆ ಕಣಕ್ಕಿಳಿಸಿದೆ.

ಇದು ಉಳಿದ 18 ಸ್ಥಾನಗಳನ್ನು ಡಿಎಂಕೆ ತನ್ನ ಮಿತ್ರಪಕ್ಷಗಳಾದ ಕಾಂಗ್ರೆಸ್, ಎಡ ಪಕ್ಷಗಳು ಮತ್ತು VCK ಗೆ ಹಂಚಿಕೆ ಮಾಡಿದೆ.

ಲೋಕಸಭೆ ಚುನಾವಣೆಗಾಗಿ ತನ್ನ ಪ್ರಣಾಳಿಕೆಯನ್ನು ಸಹ ಡಿಎಂಕೆ ಇಂದು ಬಿಡುಗಡೆ ಮಾಡಿದ್ದು, ರಾಜ್ಯಪಾಲರ ನೇಮಕಾತಿ ವೇಳೆ ರಾಜ್ಯಗಳ ಅಭಿಪ್ರಾಯ ಪಡೆಯಬೇಕು ಮತ್ತು 356ನೇ ವಿಧಿಯ ರದ್ದತಿಯಂತಹ ಇತರ ವಿಷಯಗಳನ್ನು ಪ್ರಸ್ತಾಪಿಸಿದೆ. ಅಲ್ಲದೆ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡುವ ಭರವಸೆಯನ್ನು ಸಹ ನೀಡಿದೆ.

ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ತಮಿಳುನಾಡು ಮತ್ತು ಪುದುಚೇರಿಯ ಎಲ್ಲಾ 40 ಲೋಕಸಭಾ ಸ್ಥಾನಗಳನ್ನು ಡಿಎಂಕೆ ನೇತೃತ್ವದ ಮೈತ್ರಿಕೂಟ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಕ್ಷಿಣ ಚೆನ್ನೈನ ಹಾಲಿ ಸಂಸದೆ ತಮಿಝಾಚಿ ತಂಗಪಾಂಡಿಯನ್ ಸೇರಿದಂತೆ ಮೂವರು ಮಹಿಳೆಯರನ್ನು ಆಡಳಿತ ಪಕ್ಷ ಡಿಎಂ ಕಣಕ್ಕಿಳಿಸಿದ್ದು, 11 ಹೊಸ ಮುಖಗಳಿಗೆ ಈ ಬಾರಿ ಅವಕಾಶ ನೀಡಿದೆ.

ದಯಾನಿಧಿ ಮಾರನ್, ಎಸ್ ಜಗತ್ರಕ್ಷಕನ್, ಕಲಾನಿಧಿ ವೀರಸಾಮಿ, ಕತಿರ್ ಆನಂದ್ ಮತ್ತು ಸಿ ಎನ್ ಅಣ್ಣಾದೊರೈ ಅವರನ್ನೂ ಉಳಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT