ದೆಹಲಿ ಹೈಕೋರ್ಟ್ 
ದೇಶ

True caller ವಿರುದ್ಧದ ಪಿಐಎಲ್ ವಜಾಗೊಳಿಸಿದ ದೆಹಲಿ ಹೈಕೋರ್ಟ್

ದೆಹಲಿ ಹೈಕೋರ್ಟ್ ಬುಧವಾರದಂದು True caller ಕುರಿತ ತನ್ನ ಆದೇಶವನ್ನು ಮರುಪರಿಶೀಲಿಸಲು ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ನ್ನು ವಜಾಗೊಳಿಸಿದೆ.

ನವದೆಹಲಿ: ದೆಹಲಿ ಹೈಕೋರ್ಟ್ ಬುಧವಾರದಂದು True caller ಕುರಿತ ತನ್ನ ಆದೇಶವನ್ನು ಮರುಪರಿಶೀಲಿಸಲು ಕೋರಿ ಸಲ್ಲಿಸಲಾಗಿದ್ದ ಪಿಐಎಲ್ ನ್ನು ವಜಾಗೊಳಿಸಿದೆ. ಪಿಐಎಲ್ ಸಲ್ಲಿಸಿದವರಿಗೆ 10,000 ರೂಪಾಯಿ ವೆಚ್ಚವನ್ನು ಹೈಕೋರ್ಟ್ ವಿಧಿಸಿದೆ. ಜಾಗತಿಕ ಮಟ್ಟದ ಕಾಲರ್ ಐಡಿ ವೇದಿಕೆಯಾಗಿರುವ True caller ನಿಂದ ಜನರ ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗುತ್ತಿದೆ ಎಂದು ಪಿಐಎಲ್ ನಲ್ಲಿ ಆರೋಪಿಸಲಾಗಿತ್ತು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರ ಪೀಠ ಫೆಬ್ರವರಿ 12ರ ತನ್ನ ಆದೇಶವನ್ನು ಪರಿಶೀಲಿಸಲು ಯಾವುದೇ ಆಧಾರಗಳನ್ನು ನೀಡಲಾಗಿಲ್ಲ ಎಂದು ಹೇಳಿದೆ. 10,000 ರೂಪಾಯಿ ವೆಚ್ಚವನ್ನು ಕೇಂದ್ರ ಸರ್ಕಾರಕ್ಕೆ ಪಾವತಿ ಮಾಡಬೇಕೆಂದು ನ್ಯಾಯಪೀಠ ಅರ್ಜಿದಾರರಿಗೆ ಸೂಚನೆ ನೀಡಿದೆ.

ಅರ್ಜಿದಾರ ಅಜಯ್ ಶುಕ್ಲಾ ತನ್ನ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿದ್ದರು.

ಪ್ರತಿವಾದಿ ಅಧಿಕಾರಿಗಳ ಪರವಾಗಿ ಮಾಡಿದ ಮೌಖಿಕ ಸಲ್ಲಿಕೆಗಳ ಆಧಾರದ ಮೇಲೆ ಮಾತ್ರ ಆದೇಶವನ್ನು ನೀಡಲಾಗಿದೆ ಎಂದು ಅರ್ಜಿದಾರರ ವಕೀಲರು ಹೇಳಿದರು. ಕೇಂದ್ರದ ವಕೀಲರು ಮರುಪರಿಶೀಲನಾ ಅರ್ಜಿಯನ್ನು ವಿರೋಧಿಸಿದರು, ಇದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಮತ್ತು ಈ ರೀತಿಯ ದುರುಪಯೋಗವನ್ನು ಕಟ್ಟುನಿಟ್ಟಾಗಿ ವ್ಯವಹರಿಸಬೇಕು ಎಂದು ವಾದ ಮಂಡಿಸಿದ್ದರು.

ಅಂತಹ ಅರ್ಜಿಗಳು ಸಲ್ಲಿಕೆಯಾದಾಗಲೆಲ್ಲಾ ಇಡೀ ಸರ್ಕಾರಿ ಯಂತ್ರವು ಚಲನೆಗೆ ಬರುವುದರಿಂದ ಹೆಚ್ಚಿನ ವೆಚ್ಚದೊಂದಿಗೆ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೇಂದ್ರದ ಪರ ವಕೀಲರು ವಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?