ಸದ್ಗುರು ಜಗ್ಗಿ ವಾಸುದೇವ್ 
ದೇಶ

ಸದ್ಗುರು ಜಗ್ಗಿ ವಾಸುದೇವ್ ಗೆ ತಲೆಯಲ್ಲಿ ರಕ್ತಸ್ರಾವ; ತುರ್ತು ಬ್ರೇನ್ ಸರ್ಜರಿ

ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬುಧವಾರ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ನವದೆಹಲಿ: ಇಶಾ ಫೌಂಡೇಶನ್‌ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬುಧವಾರ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ತಲೆಯಲ್ಲಿ ರಕ್ತಸ್ರಾವ ತಡೆಯಲು ಮಾರ್ಚ್ 17 ರಂದು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಶಸ್ತ್ರಚಿಕಿತ್ಸೆಯ ನಂತರ ಸದ್ಗುರು ವೆಂಟಿಲೇಟರ್‌ನಿಂದ ಹೊರ ಬಂದಿದ್ದಾರೆ. ಅವರ ಮೆದುಳು, ದೇಹ ಮತ್ತು ಪ್ರಮುಖ ಅಂಗಗಳು ಚೇತರಿಸಿಕೊಳ್ಳುತ್ತಿವೆ ಎಂದು ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆ ತಿಳಿಸಿದೆ.

66 ವರ್ಷದ ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್‌ನ ಸಂಸ್ಥಾಪ ಸದ್ಗುರು ಜಗ್ಗಿ ವಾಸುದೇವ್ ಅವರು ಪರಿಸರ ಸಂರಕ್ಷಣೆಗಾಗಿ 'ಮಣ್ಣು ಉಳಿಸಿ' ಮತ್ತು 'ನದಿಗಳನ್ನು ಉಳಿಸಿ' ಸೇರಿದಂತೆ ಹಲವು ಅಭಿಯಾನಗಳನ್ನು ಕೈಗೊಂಡಿದ್ದರು.

ಕಳೆದ ನಾಲ್ಕು ವಾರಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಜಗ್ಗಿ ವಾಸುದೇವ್ ಅವರು, ತೀವ್ರ ನೋವಿನ ಹೊರತಾಗಿಯೂ, ಅವರು ತಮ್ಮ ಸಾಮಾನ್ಯ ದೈನಂದಿನ ಸಾಮಾಜಿಕ ಚಟುವಟಿಕೆಗಳನ್ನು ಮುಂದುವರೆಸಿದ್ದರು ಮತ್ತು ಮಾರ್ಚ್ 8 ರಂದು ಮಹಾ ಶಿವರಾತ್ರಿ ಕಾರ್ಯಕ್ರಮವನ್ನು ಸಹ ನಡೆಸಿಕೊಟ್ಟಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾರ್ಚ್ 15 ರ ಹೊತ್ತಿಗೆ ತಲೆನೋವು ತೀವ್ರವಾದ ನಂತರ ಅವರು ಆಸ್ಪತ್ರೆಯ ಹಿರಿಯ ಸಲಹೆಗಾರ ನರರೋಗ ತಜ್ಞ ಡಾ ವಿನಿತ್ ಸೂರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದಾರೆ. ಸೂರಿ ಅವರು ತಕ್ಷಣವೇ ಎಂಆರ್ ಐ ಮಾಡಿಸುವಂತೆ ಸಲಹೆ ನೀಡಿದ್ದಾರೆ. ಎಂಆರ್ ಐನಲ್ಲಿ ತಲೆಯಲ್ಲಿ ರಕ್ತಸ್ರಾವ ಆಗುತ್ತಿರುವುದು ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT