ಜೆಪಿ ನಡ್ಡಾ 
ದೇಶ

ಕಾಂಗ್ರೆಸ್ ನೈತಿಕವಾಗಿ ದಿವಾಳಿಯಾಗಿದೆ, ಆರ್ಥಿಕವಾಗಿ ಅಲ್ಲ: ಬಿಜೆಪಿ

ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿರುವುದಕ್ಕೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿರುವುದಕ್ಕೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿರುವ ಜೆಪಿ ನಡ್ಡಾ, ಕಾಂಗ್ರೆಸ್ ನ್ನು ಜನ ಈ ಬಾರಿಯ ಚುನಾವಣೆಯಲ್ಲಿ ಸಂಪೂರ್ಣ ತಿರಸ್ಕರಿಸಲಿದ್ದಾರೆ ಹಾಗೂ ಐತಿಹಾಸಿಕ ಸೋಲನ್ನು ಎದುರಿಸುವ ಭಯದಿಂದ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಭಾರತದ ಪ್ರಜಾಪ್ರಭುತ್ವ ಹಾಗೂ ಸಂಸ್ಥೆಗಳ ಬಗ್ಗೆ ಮನಸೋ ಇಚ್ಛೆ ಮಾತನಾಡಿದ್ದಾರೆ, ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಭೀತಿಯನ್ನು ಆರ್ಥಿಕ ಸಂಕಷ್ಟದ ಮೇಲೆ ದೂರುತ್ತಿದ್ದಾರೆ ಎಂದು ಜೆಪಿ ನಡ್ಡಾ ಟ್ವಿಟರ್ ನಲ್ಲಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಗೆ ಎದುರಾಗಿರುವುದು ನೈತಿಕ ಹಾಗೂ ಬೌದ್ಧಿಕ ದಿವಾಳಿತನ ಆರ್ಥಿಕ ದಿವಾಳಿತನವಲ್ಲ ಎಂದು ಜೆಪಿ ನಡ್ಡಾ ಹೇಳಿದ್ದಾರೆ. ಅವರ ಪೋಸ್ಟ್, "ತಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಬದಲು, ಕಾಂಗ್ರೆಸ್ ತಮ್ಮ ತೊಂದರೆಗಳಿಗೆ ಅಧಿಕಾರಿಗಳನ್ನು ದೂಷಿಸುತ್ತಿದೆ. ಅದು ಐಟಿಎಟಿ ಅಥವಾ ದೆಹಲಿ ಹೈಕೋರ್ಟ್ ಆಗಿರಲಿ, ಅವರು ಕಾಂಗ್ರೆಸ್ ಅನ್ನು ನಿಯಮಗಳನ್ನು ಅನುಸರಿಸಲು, ಬಾಕಿ ತೆರಿಗೆ ಪಾವತಿಸಲು ಕೇಳಿದ್ದಾರೆ ಆದರೆ ಪಕ್ಷವು ಹಾಗೆ ಮಾಡಲಿಲ್ಲ.

“ಪ್ರತಿಯೊಂದು ಕ್ಷೇತ್ರದಿಂದ, ಪ್ರತಿ ರಾಜ್ಯದಲ್ಲಿ ಮತ್ತು ಇತಿಹಾಸದ ಪ್ರತಿ ಕ್ಷಣದಲ್ಲಿ ಲೂಟಿ ಮಾಡಿದ ಪಕ್ಷ ಆರ್ಥಿಕ ಅಸಹಾಯಕತೆಯ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದವಾಗಿದೆ. ಜೀಪ್‌ನಿಂದ ಪ್ರಾರಂಭಿಸಿ ಚಾಪರ್ ಹಗರಣದವರೆಗಿನ ಎಲ್ಲಾ ಹಗರಣಗಳಿಂದ ಕೂಡಿದ ಹಣವನ್ನು ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕಾಗಿ ಬಳಸಬಹುದು. ," ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ನಡ್ಡಾ, "ಕಾಂಗ್ರೆಸ್‌ನ ಅರೆಕಾಲಿಕ ನಾಯಕರು ಭಾರತದಲ್ಲಿ ಪ್ರಜಾಪ್ರಭುತ್ವವಿದೆ ಎಂಬುದು ಸುಳ್ಳು ಎಂದು ಹೇಳುತ್ತಾರೆ - 1975 ಮತ್ತು 1977 ರ ನಡುವೆ ಕೆಲವೇ ತಿಂಗಳುಗಳ ಸಮಯದಲ್ಲಿ ಭಾರತ ಪ್ರಜಾಪ್ರಭುತ್ವವಾಗಿರಲಿಲ್ಲ ಎಂಬುದನ್ನು ನಾನು ಅವರಿಗೆ ವಿನಮ್ರವಾಗಿ ನೆನಪಿಸುತ್ತೇನೆ. ಆ ಅವಧಿಯಲ್ಲಿ ಭಾರತದ ಪ್ರಧಾನಿ ಬೇರೆ ಯಾರೂ ಅಲ್ಲ, ಶ್ರೀಮತಿ ಇಂದಿರಾ ಗಾಂಧಿ ಎಂದು ನಡ್ಡಾ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT