ಚುನಾವಣಾ ಆಯೋಗದ ಕಚೇರಿ 
ದೇಶ

ವಿಕಸಿತ ಭಾರತ ಸಂದೇಶ ಕಳಿಸುವುದನ್ನು ತಕ್ಷಣವೇ ನಿಲ್ಲಿಸಿ: ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ

'ವಿಕಸಿತ ಭಾರತ ಸಂಪರ್ಕ' ಅಡಿಯಲ್ಲಿ ನಾಗರಿಕರಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸುವಿಕೆಯನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗವು ಗುರುವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ನವದೆಹಲಿ: 'ವಿಕಸಿತ ಭಾರತ ಸಂಪರ್ಕ' ಅಡಿಯಲ್ಲಿ ನಾಗರಿಕರಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸುವಿಕೆಯನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗವು ಗುರುವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ಈ ವಿಷಯದ ಬಗ್ಗೆ ದೂರುಗಳನ್ನು ಸ್ವೀಕರಿಸಿದ ನಂತರ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಈ ನಿರ್ದೇಶನ ನೀಡಿದೆ.

ನ್ಯಾಯಸಮ್ಮತತೆ ಮತ್ತು ಸಮಾನ ಅವಕಾಶವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿರುವ ವಿಸ್ತೃತ ಕ್ರಮಗಳ ಭಾಗವಾಗಿ ಆಯೋಗವು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಆಯೋಗ ಹೇಳಿದೆ.

ಈ ಸಂಬಂಧಿತ ವಿಷಯಗಳ ಅನುಸರಣೆಗೆ ಸಂಬಂಧಿಸಿದಂತೆ ಸಚಿವಾಲಯದಿಂದ ವರದಿಯನ್ನು ಸಹ ಕೋರಿದೆ.

ಲೋಕಸಭೆ ಚುನಾವಣೆ ಅಂಗವಾಗಿ ಮಾರ್ಚ್ 16ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಬರೆದ ಬಹಿರಂಗ ಪತ್ರದೊಂದಿಗೆ ಕೇಂದ್ರ ಸರ್ಕಾರದ ಅಭಿವೃದ್ಧಿ ಹೊಂದಿದ ಭಾರತ (ವಿಕಸಿತ ಭಾರತ) ನಿರ್ಮಾಣಕ್ಕಾಗಿ ಸಲಹೆಗಳನ್ನು ಸಲ್ಲಿಸಲು ಮನವಿ ಮಾಡಿಕೊಂಡಿರುವ ಸಂದೇಶಗಳನ್ನು ವಾಟ್ಸಾಪ್‌ ಮೂಲಕ ಕಳುಹಿಸಲಾಗಿದೆ ಎಂದು ಸಚಿವಾಲಯವು ಆಯೋಗಕ್ಕೆ ತಿಳಿಸಿತ್ತು.

ವ್ಯವಸ್ಥೆ ಮತ್ತು ನೆಟ್‌ವರ್ಕ್ ಮೂಲಸೌಕರ್ಯದಲ್ಲಿನ ಮಿತಿಗಳಿಂದಾಗಿ ಆ ಸಂದೇಶಗಳು ಕೆಲವರಿಗೆ ವಿಳಂಬವಾಗಿ ತಲುಪಿರಬಹುದು ಎಂದು ಸಚಿವಾಲಯವು ಆಯೋಗಕ್ಕೆ ತಿಳಿಸಿದೆ.

2024ರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಮತ್ತು ಮಾದರಿ ನೀತಿ ಸಂಹಿತೆ ಜಾರಿಗೆ ಬಂದರೂ ಸಹ ಸರ್ಕಾರದ ಯೋಜನೆಗಳನ್ನು ಎತ್ತಿ ತೋರಿಸುವ ಇಂತಹ ಸಂದೇಶಗಳನ್ನು ನಾಗರಿಕರು ವಾಟ್ಸಾಪ್ ಮೂಲಕ ಇನ್ನೂ ಸ್ವೀಕರಿಸುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ.

ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ಸಂದೇಶಕ್ಕೆ ಆಕ್ಷೇಪಣೆಗಳನ್ನು ಎತ್ತಿದ್ದವು. ಸರ್ಕಾರದ ಈ ಕ್ರಮವು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಅಗತ್ಯ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT