ಇಂಡಿಯಾ ಮೈತ್ರಿಕೂಟ ನಾಯಕರು 
ದೇಶ

INDIA ನಿಮಗೆ ತಕ್ಕ ಪ್ರತ್ಯುತ್ತರ ನೀಡುತ್ತೆ: ಕೇಜ್ರಿವಾಲ್ ಬಂಧನ ಹಿನ್ನೆಲೆ ಬಿಜೆಪಿ ವಿರುದ್ಧ ಕೆಂಡ ಕಾರಿದ ಇಂಡಿಯಾ ಮೈತ್ರಿಕೂಟ!

ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿರುವುದಕ್ಕೆ ಇಂಡಿಯಾ ಕೂಟದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು INDIA ನಿಮಗೆ ತಕ್ಕ ಪ್ರತ್ಯುತ್ತರ ನೀಡುತ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿರುವುದಕ್ಕೆ ಇಂಡಿಯಾ ಕೂಟದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು INDIA ನಿಮಗೆ ತಕ್ಕ ಪ್ರತ್ಯುತ್ತರ ನೀಡುತ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಹೆದರಿದ ಸರ್ವಾಧಿಕಾರಿ, ಸತ್ತ ಪ್ರಜಾಪ್ರಭುತ್ವವನ್ನು ರಚಿಸಲು ಬಯಸುತ್ತಾನೆ. ಮಾಧ್ಯಮ ಸೇರಿದಂತೆ ಎಲ್ಲ ಸಂಸ್ಥೆಗಳನ್ನು ವಶಪಡಿಸಿಕೊಂಡು, ಪಕ್ಷ ಒಡೆಯುವುದು, ಸಂಸ್ಥೆಗಳಿಂದ ಹಣ ವಸೂಲಿ, ಪ್ರಮುಖ ವಿರೋಧ ಪಕ್ಷದ ಖಾತೆಯನ್ನು ಸ್ಥಗಿತಗೊಳಿಸುವುದು. ಇಷ್ಟೇ ಸಾಕಾಗದೇ ಇದ್ದಾಗ ಇದೀಗ ಚುನಾಯಿತ ಮುಖ್ಯಮಂತ್ರಿಗಳ ಬಂಧನವೂ ಮಾಮೂಲಿಯಾಗಿಬಿಟ್ಟಿದೆ. ಇದಕ್ಕೆ INDIA ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.

ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಗಳ ಪ್ರತೀಕಾರದ ದುರುಪಯೋಗವನ್ನು ನಾನು ಬಲವಾಗಿ ಖಂಡಿಸುತ್ತೇನೆ, ವಿಶೇಷವಾಗಿ ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿರುವಾಗ ಬಿಜೆಪಿ ಎಷ್ಟರ ಮಟ್ಟಿಗೆ ಅಧಿಕಾರಕ್ಕೆ ಬರಬಹುದು ಎಂಬುದನ್ನು ಈ ಬಂಧನ ತೋರಿಸುತ್ತದೆ. ಅರವಿಂದ್ ಕೇಜ್ರಿವಾಲ್ ವಿರುದ್ಧದ ಈ ಅಸಂವಿಧಾನಿಕ ಕ್ರಮದ ವಿರುದ್ಧ 'INDIA' ಒಟ್ಟಾಗಿದೆ ಎಂದು ಎನ್‌ಸಿಪಿ ನಾಯಕ ಶರದ್ ಪವಾರ್ ಎಕ್ಸ್-ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ. ಈ ಭಯದಿಂದ ಚುನಾವಣೆ ವೇಳೆಗೆ ಯಾವುದೇ ವಿಧಾನದಿಂದ ವಿರೋಧ ಪಕ್ಷದ ನಾಯಕರನ್ನು ಸಾರ್ವಜನಿಕರಿಂದ ದೂರವಿಡಲು ಬಯಸುತ್ತಿದೆ. ಇದಕ್ಕೆ ಬಂಧನವಷ್ಟೇ ಸಬೂಬು. ಈ ಬಂಧನದ ವಿರುದ್ಧ ಜನರು ಹೊಸ ಕ್ರಾಂತಿಗೆ ನಾಂದಿ ಹಾಡಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪೋಸ್ಟ್ ಮಾಡಿದ್ದಾರೆ.

2024ರ ಚುನಾವಣೆಯ ಮೊದಲು ಒಂದು ದಶಕದ ವೈಫಲ್ಯಗಳು ಮತ್ತು ಸನ್ನಿಹಿತವಾದ ಸೋಲಿನ ಭಯದಿಂದ ಫ್ಯಾಸಿಸ್ಟ್ ಬಿಜೆಪಿ ಸರ್ಕಾರವು ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸುವ ಮೂಲಕ ಪಾತಾಳಕ್ಕೆ ಇಳಿದಿದೆ. ಹೇಮಂತ್ ಸೋರೆನ್ ನಂತರ, ಅರವಿಂದ್ ಕೇಜ್ರಿವಾಲ್ ಅನ್ಯಾಯವಾಗಿ ಗುರಿಯಾಗಿದ್ದಾರೆ ಎಂದು ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT