ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಇಡಿಯಿಂದ ಕೇಜ್ರಿವಾಲ್ ವಿಚಾರಣೆ; ಬಂಧನ ಸಾಧ್ಯತೆ: 'ಸುಪ್ರೀಂ' ಮೊರೆ ಹೋದ ದೆಹಲಿ ಸಿಎಂ, ಭದ್ರತೆ ಹೆಚ್ಚಳ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿದ್ದು, ಯಾವುದೇ ಕ್ಷಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಈ ಮಧ್ಯೆ, ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಸಿಎಂ ಕೇಜ್ರಿವಾಲ್ ಗೆ ಯಾವುದೇ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಇಂದು ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ ಇಡಿ ಅಧಿಕಾರಿಗಳ ತಂಡ, ಮತ್ತೊಂದು ಸಮನ್ಸ್ ಹಾಗೂ ಸರ್ಚ್ ವಾರಂಟ್ ಅನ್ನು ಜಾರಿ ಮಾಡಿದ್ದಾರೆ.

ಇಡಿ ಅಧಿಕಾರಿಗಳ ತಂಡ ದೆಹಲಿ ಸಿಎಂ ನಿವಾಸಕ್ಕೆ ಆಗಮಿಸಿದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ ಮತ್ತು ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ದೆಹಲಿ ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ RAF ಮತ್ತು CRPF ಪಡೆಗಳನ್ನು ನಿಯೋಜಿಸಲಾಗಿದೆ.

ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇರುವು ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಡಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೋರಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT