ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಜೈಲಿನೊಳಗಿದ್ದರೂ, ನನ್ನ ಜೀವನ ರಾಷ್ಟ್ರ ಸೇವೆಗೆ ಮುಡಿಪು: ಕೇಜ್ರಿವಾಲ್

ಜೈಲಿನೊಳಗಿರಲಿ ಅಥವಾ ಜೈಲಿನ ಹೊರಗಿರಲಿ ನನ್ನ ಜೀವನ ದೇಶಕ್ಕೆ ಮುಡಿಪು ಆಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಜೈಲಿನೊಳಗಿರಲಿ ಅಥವಾ ಜೈಲಿನ ಹೊರಗಿರಲಿ ನನ್ನ ಜೀವನ ದೇಶಕ್ಕೆ ಮುಡಿಪು ಆಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಅವರನ್ನು ಇಲ್ಲಿನ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿದೆ.

ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿರುವಾಗ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, "ನಾನು ಜೈಲಿನ ಒಳಗೆ ಅಥವಾ ಹೊರಗೆ ಇದ್ದರೂ ನನ್ನ ಜೀವನ ರಾಷ್ಟ್ರ ಸೇವೆಗೆ ಮುಡಿಪಾಗಿದೆ ಎಂದರು. ಗುರುವಾರ ರಾತ್ರಿ ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ ಮೊದಲ ಬಾರಿಗೆ ಕೇಜ್ರಿವಾಲ್ ಪ್ರತಿಕ್ರಿಯಿಸಿದರು.

ಇದು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯುವ "ರಾಜಕೀಯ ಪಿತೂರಿ" ಎಂದು ಎಎಪಿ ಹೇಳಿದೆ. ಕೇಜ್ರಿವಾಲ್ ಬಂಧನದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಪಕ್ಷ ಕರೆ ನೀಡಿದೆ.

ದೆಹಲಿ ಕ್ಯಾಬಿನೆಟ್ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್, ಪೂರ್ವ ದೆಹಲಿಯ ಲೋಕಸಭಾ ಅಭ್ಯರ್ಥಿ ಕುಲದೀಪ್ ಕುಮಾರ್ ಸೇರಿದಂತೆ ಪಕ್ಷದ ಹಲವಾರು ನಾಯಕರನ್ನು ಐಟಿಒದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಬಂಧಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT