ಕಾಂಗ್ರೆಸ್‌ನ ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ 
ದೇಶ

ಹಿಮಾಚಲ ಪ್ರದೇಶ: ಕಾಂಗ್ರೆಸ್‌ನ ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ವಿಪ್ ಧಿಕ್ಕರಿಸಿ ಶಾಸಕತ್ವದಿಂದ ಅನರ್ಹಗೊಂಡಿರುವ ಹಿಮಾಚಲ ಪ್ರದೇಶ ವಿಧಾನಸಭೆಯ ಆರು ಮಾಜಿ ಶಾಸಕರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ನವದೆಹಲಿ: ಕಾಂಗ್ರೆಸ್ ವಿಪ್ ಧಿಕ್ಕರಿಸಿ ಶಾಸಕತ್ವದಿಂದ ಅನರ್ಹಗೊಂಡಿರುವ ಹಿಮಾಚಲ ಪ್ರದೇಶ ವಿಧಾನಸಭೆಯ ಆರು ಮಾಜಿ ಶಾಸಕರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್, ಹಿಮಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಬಿಂದಾಲ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ನ ಅನರ್ಹ ಶಾಸಕರು ಬಿಜೆಪಿ ಸೇರಿದರು.

ಮಾಜಿ ಶಾಸಕರನ್ನು ಪಕ್ಷಕ್ಕೆ ಸ್ವಾಗತಿಸಿದ ಠಾಕೂರ್, ಅವರ ಪಕ್ಷ ಸೇರ್ಪಡೆಯಿಂದ ಬಿಜೆಪಿ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಇದು ಜನರ ಕೋಪಕ್ಕೆ ಕಾರಣವಾಗಿದೆ ಎಂದರು.

ಈ ನಾಯಕರು ಇತ್ತೀಚಿನ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದರು. ಇದು ಕಾಂಗ್ರೆಸ್ ವಿರುದ್ಧ "ಸಾರ್ವಜನಿಕ ಕೋಪ" ವನ್ನು ಪ್ರತಿಬಿಂಬಿಸುತ್ತದೆ ಎಂದು ಠಾಕೂರ್ ಹೇಳಿದರು.

ಅನರ್ಹ ಶಾಸಕರಾದ ಸುಧೀರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್‌ಪಾಲ್, ಚೆತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಭುಟ್ಟೊ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT