ಸುಕೇಶ್ ಚಂದ್ರಶೇಖರ್, ಅರವಿಂದ್ ಕೇಜ್ರಿವಾಲ್ 
ದೇಶ

‘ತಿಹಾರ್​​​​ ಕ್ಲಬ್​​​ಗೆ ಸ್ವಾಗತ.. ನಿಮ್ಮ ಎಲ್ಲ ನಾಟಕ ಬಂದ್.. ನಿಮ್ಮ ವಿರುದ್ಧ ಸಾಕ್ಷ್ಯ ಹೇಳುತ್ತೇನೆ': ಕೇಜ್ರಿವಾಲ್ ವಿರುದ್ಧ ಸುಕೇಶ್ ಚಂದ್ರಶೇಖರ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಪ್ರೂವರ್ ಆಗಿ ನಾನು ಎಲ್ಲ ಸಾಕ್ಷ್ಯಗಳನ್ನು ಹೇಳುತ್ತೇನೆ ಎಂದು ವಂಚಕ ಸುಕೇಶ್ ಚಂದ್ರಶೇಖರ್ ಹೇಳಿದ್ದಾನೆ.

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಪ್ರೂವರ್ ಆಗಿ ನಾನು ಎಲ್ಲ ಸಾಕ್ಷ್ಯಗಳನ್ನು ಹೇಳುತ್ತೇನೆ ಎಂದು ವಂಚಕ ಸುಕೇಶ್ ಚಂದ್ರಶೇಖರ್ ಹೇಳಿದ್ದಾನೆ.

ಈ ಸಂಬಂಧ ಸುಕೇಶ್ ಚಂದ್ರಶೇಖರ್ ಪತ್ರವೊಂದನ್ನು ಬರೆದಿದ್ದು, 'ತಿಹಾರ್​​​​ ಕ್ಲಬ್​​​ಗೆ ಸ್ವಾಗತ.. ನಿಮ್ಮ ಎಲ್ಲ ನಾಟಕ ಬಂದ್.. ಯಾವಾಗಲೂ ಸತ್ಯ ಗೆಲ್ಲುತ್ತದೆ. ಇದು ಹೊಸ ಭಾರತದ ಶಕ್ತಿ, ಕಾನೂನಿನ ಮುಂದೆ ಯಾರು ಮೇಲಲ್ಲ, ಎಂಬುದಕ್ಕೆ ಉತ್ತಮ ಉದಾಹರಣೆ. ಹಿಂದಿನದನ್ನು ಬಹಿರಂಗಪಡಿಸುತ್ತೇನೆ. ಅರವಿಂದ್​​ ಕೇಜ್ರಿವಾಲ್ ಕಳ್ಳ.. ಆತನ ನೈಜತೆಯನ್ನು ಪ್ರಪಂಚಕ್ಕೆ ತೋರಿಸುತ್ತೇನೆ ಎಂದು ಸುಕೇಶ್ ಪತ್ರ ಬರೆದಿದ್ದಾನೆ.

'ನನ್ನ ಪ್ರೀತಿಯ ಅರವಿಂದ್​​ ಕೇಜ್ರಿವಾಲ್​​​ ಜೀ, ತಿಹಾರ್​​​​ ಕ್ಲಬ್​​​​ಗೆ ಬಾಸ್​​ ಆಗಿರುವ ನಿಮ್ಮನ್ನು ಸ್ವಾಗತಿಸಲು ಒಂದು ಉತ್ತಮ ಅವಕಾಶವನ್ನು ನೀಡಿದ್ದೀರಾ, ಇಂದಿನಿಂದ ನಿಮ್ಮ ಎಲ್ಲ ನಾಟಕಗಳು ಅಂತ್ಯವಾಗಲಿದೆ. ಮುಂದಿನ ವಾರ ಮಾರ್ಚ್ 25ಕ್ಕೆ ನನ್ನ ಜನ್ಮದಿನ, ಆ ಸಂಭ್ರಮವನ್ನು ನೀವು ಹೆಚ್ಚಿಸಿದ್ದೀರಾ, ಏಕೆಂದರೆ ನನ್ನ ಜನ್ಮದಿನದಂದು ತಿಹಾರ್​​​ಗೆ ಬಂದಿದ್ದೀರಾ, ಅದು ನನಗೆ ಖುಷಿ, ನನ್ನ ಸಂಭ್ರಮ ಡಬಲ್​​​ ಆಗಿದೆ. ತಿಹಾರ್​​​ ಕ್ಲಬ್​​​ ನಡೆಸಲು ಮೂವರು ಸಹೋದರರು ಬಂದಿದ್ದಾರೆ.

ಮೊದಲನೇಯವರು ಬಿಗ್​​ಬಾಸ್​​​​​ ಅರವಿಂದ್​​​ ಕೇಜ್ರಿವಾಲ್​​​, ಎರಡನೇಯದ್ದು ಸಿಇಒ ಮನೀಶ್​​ ಸಿಸೋಡಿಯಾ ಮೂರನೇಯದ್ದು, ಸಿಇಒ ಸತ್ಯೇಂದರ್​ ಜೈನ್​​​ ಎಂದು ಸುಕೇಶ್ ಲೇವಡಿ ಮಾಡಿದ್ದಾರೆ.

ಅಂತೆಯೇ ಕೇಜ್ರಿವಾಲ್​​ ಮುಂದಿನ ದಿನಗಳಲ್ಲಿ ನಿಮ್ಮ ಎಲ್ಲ ಅಕ್ರಮ ಹೊರಬರಲಿದೆ. ಈಗಾಗಲೇ ದೆಹಲಿ ಬಡವರಿಂದ 10 ರೀತಿಯ ಹಗರಣ ಮಾಡಿದ್ದೀರಾ, ಇನ್ನು 4 ನಿಮ್ಮ ಹಗರಣಕ್ಕೆ ನಾನೇ ಸಾಕ್ಷಿ, ಆದರೆ ನಾನು ಅದನ್ನು ಇಲ್ಲಿ ತಿಳಿಸುವುದಿಲ್ಲ ಎಂದು ಹೇಳಿದ್ದಾರೆ.

ಅಪ್ರೂವರ್ ಆಗುತ್ತೇನೆ!

ಇದೇ ವೇಳೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಂತೆ ಚಂದ್ರಶೇಖರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, "ನಾನು ಕೇಜ್ರಿವಾಲ್ ಮತ್ತು ಅವರ ತಂಡದ ವಿರುದ್ಧ ಅಪ್ರೂವರ್ ಆಗುತ್ತೇನೆ. ನಾನು ಅವರನ್ನು ಬಹಿರಂಗಪಡಿಸುತ್ತೇನೆ. ಅವರ ನೈಜ ಮುಖವನ್ನು ಜಗತ್ತಿಗೆ ತೋರಿಸುತ್ತೇನೆ. ಎಲ್ಲ ಸಾಕ್ಷ್ಯಗಳನ್ನು ನೀಡಲಾಗಿದೆ, ಸತ್ಯಕ್ಕೆ ಜಯ ಸಿಕ್ಕಿದೆ, ತಿಹಾರ್ ಜೈಲಿಗೆ ಅವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿ ಬಂಧಿತನಾಗಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT