ವೈ ಕೆಟಗರಿ ಭದ್ರತೆ ಪಡೆದ ಸಮಾಜವಾದಿ ಶಾಸಕರು 
ದೇಶ

ಉತ್ತರ ಪ್ರದೇಶ: ಬಿಜೆಪಿಗೆ ಅಡ್ಡ ಮತದಾನ ಮಾಡಿದ ಎಸ್‌ಪಿಯ 4 ಶಾಸಕರಿಗೆ Y-ಕೆಟಗರಿ ಭದ್ರತೆ

ಫೆಬ್ರವರಿ 27 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ ಸಮಾಜವಾದಿ ಪಕ್ಷದ ನಾಲ್ವರು ಶಾಸಕರಿಗೆ ವೈ-ಕೆಟಗರಿ ಭದ್ರತೆಯನ್ನು ನಿಗದಿಪಡಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಲಖನೌ: ಫೆಬ್ರವರಿ 27 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ ಸಮಾಜವಾದಿ ಪಕ್ಷದ ನಾಲ್ವರು ಶಾಸಕರಿಗೆ ವೈ-ಕೆಟಗರಿ ಭದ್ರತೆಯನ್ನು ನಿಗದಿಪಡಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಅಭಯ್ ಸಿಂಗ್ (ಗೋಸಾಯ್ ಗಂಜ್) ಮನೋಜ್ ಕುಮಾರ್ ಪಾಂಡೆ (ಉಂಚಹರ್), ರಾಕೇಶ್ ಪ್ರತಾಪ್ ಸಿಂಗ್ (ಗೌರಿಗಂಜ್) ಮತ್ತು ವಿನೋದ್ ಚತುರ್ವೇದಿ (ಕಲ್ಪಿ) ಅವರಿಗೆ ವೈ-ಕೆಟಗರಿ ಭದ್ರತೆ ಕಲ್ಪಿಸಲಾಗಿದೆ.ಈ ನಾಲ್ವರು ಶಾಸಕರು, ಇತರ ಮೂರು ಪಕ್ಷದ ಶಾಸಕರಾದ ಪೂಜಾ ಪಾಲ್, ರಾಕೇಶ್ ಪಾಂಡೆ ಮತ್ತು ಅಶುತೋಷ್ ಮೌರ್ಯ ಅವರೊಂದಿಗೆ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದರು. ಇದರಿಂದಾಗಿ ಬಿಜೆಪಿ ಅಭ್ಯರ್ಥಿ ಸಂಜಯ್ ಸೇಠ್ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿ ಅಲೋಕ್ ರಂಜನ್ ಅವರನ್ನು ಸೋಲಿಸಿದರು.

ವೈ-ಕೆಟಗರಿಯ ಭದ್ರತೆಯ ಭಾಗವಾಗಿ, ಎಂಟು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಈ ಶಾಸಕರಿಗೆ ಭದ್ರತೆ ನೀಡಲಿದ್ದಾರೆ. ಐವರು ಮನೆಗೆ ಭದ್ರತೆ ನೀಡಿದರೆ, ಉಳಿದ ಮೂವರು ಅವರೊಂದಿಗೆ ಸಂಚರಿಸಲಿದ್ದಾರೆ.

ಅಭಯ್ ಸಿಂಗ್ ಅವರಿಗೆ ಶುಕ್ರವಾರಯೇ ಭದ್ರತೆ ನೀಡಲಾಗಿದ್ದರೆ,, ಉಳಿದ ಮೂವರಿಗೆ ಶನಿವಾರದಿಂದ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT