ವೈ ಕೆಟಗರಿ ಭದ್ರತೆ ಪಡೆದ ಸಮಾಜವಾದಿ ಶಾಸಕರು 
ದೇಶ

ಉತ್ತರ ಪ್ರದೇಶ: ಬಿಜೆಪಿಗೆ ಅಡ್ಡ ಮತದಾನ ಮಾಡಿದ ಎಸ್‌ಪಿಯ 4 ಶಾಸಕರಿಗೆ Y-ಕೆಟಗರಿ ಭದ್ರತೆ

ಫೆಬ್ರವರಿ 27 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ ಸಮಾಜವಾದಿ ಪಕ್ಷದ ನಾಲ್ವರು ಶಾಸಕರಿಗೆ ವೈ-ಕೆಟಗರಿ ಭದ್ರತೆಯನ್ನು ನಿಗದಿಪಡಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಲಖನೌ: ಫೆಬ್ರವರಿ 27 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ ಸಮಾಜವಾದಿ ಪಕ್ಷದ ನಾಲ್ವರು ಶಾಸಕರಿಗೆ ವೈ-ಕೆಟಗರಿ ಭದ್ರತೆಯನ್ನು ನಿಗದಿಪಡಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಅಭಯ್ ಸಿಂಗ್ (ಗೋಸಾಯ್ ಗಂಜ್) ಮನೋಜ್ ಕುಮಾರ್ ಪಾಂಡೆ (ಉಂಚಹರ್), ರಾಕೇಶ್ ಪ್ರತಾಪ್ ಸಿಂಗ್ (ಗೌರಿಗಂಜ್) ಮತ್ತು ವಿನೋದ್ ಚತುರ್ವೇದಿ (ಕಲ್ಪಿ) ಅವರಿಗೆ ವೈ-ಕೆಟಗರಿ ಭದ್ರತೆ ಕಲ್ಪಿಸಲಾಗಿದೆ.ಈ ನಾಲ್ವರು ಶಾಸಕರು, ಇತರ ಮೂರು ಪಕ್ಷದ ಶಾಸಕರಾದ ಪೂಜಾ ಪಾಲ್, ರಾಕೇಶ್ ಪಾಂಡೆ ಮತ್ತು ಅಶುತೋಷ್ ಮೌರ್ಯ ಅವರೊಂದಿಗೆ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದರು. ಇದರಿಂದಾಗಿ ಬಿಜೆಪಿ ಅಭ್ಯರ್ಥಿ ಸಂಜಯ್ ಸೇಠ್ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿ ಅಲೋಕ್ ರಂಜನ್ ಅವರನ್ನು ಸೋಲಿಸಿದರು.

ವೈ-ಕೆಟಗರಿಯ ಭದ್ರತೆಯ ಭಾಗವಾಗಿ, ಎಂಟು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಈ ಶಾಸಕರಿಗೆ ಭದ್ರತೆ ನೀಡಲಿದ್ದಾರೆ. ಐವರು ಮನೆಗೆ ಭದ್ರತೆ ನೀಡಿದರೆ, ಉಳಿದ ಮೂವರು ಅವರೊಂದಿಗೆ ಸಂಚರಿಸಲಿದ್ದಾರೆ.

ಅಭಯ್ ಸಿಂಗ್ ಅವರಿಗೆ ಶುಕ್ರವಾರಯೇ ಭದ್ರತೆ ನೀಡಲಾಗಿದ್ದರೆ,, ಉಳಿದ ಮೂವರಿಗೆ ಶನಿವಾರದಿಂದ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT