ಸುನಿಲ್ ಶರ್ಮಾ 
ದೇಶ

ಜೈಪುರ್ ಡೈಲಾಗ್ ಜೊತೆ ಸಂಪರ್ಕ: ಸುನಿಲ್ ಶರ್ಮಾ ಗೆ ನೀಡಿದ್ದ ಟಿಕೆಟ್ ವಾಪಸ್ ಪಡೆದ ಕಾಂಗ್ರೆಸ್!

ದೇಶಾದ್ಯಂತ ಲೋಕಸಭಾ ಚುನಾವಣೆ 2024 ರ ತಯಾರಿ ಭರ್ಜರಿಯಾಗಿ ನಡೆದಿದ್ದು, ಕಾಂಗ್ರೆಸ್ ಜೈಪುರದ ತನ್ನ ಅಭ್ಯರ್ಥಿಯನ್ನು ಏಕಾ ಏಕಿ ಬದಲಾವಣೆ ಮಾಡಿದೆ.

ಜೈಪುರ: ದೇಶಾದ್ಯಂತ ಲೋಕಸಭಾ ಚುನಾವಣೆ 2024 ರ ತಯಾರಿ ಭರ್ಜರಿಯಾಗಿ ನಡೆದಿದ್ದು, ಕಾಂಗ್ರೆಸ್ ಜೈಪುರದ ತನ್ನ ಅಭ್ಯರ್ಥಿಯನ್ನು ಏಕಾ ಏಕಿ ಬದಲಾವಣೆ ಮಾಡಿದೆ.

ಈ ಕ್ಷೇತ್ರದಿಂದ ರಾಜಸ್ಥಾನದ ಮಾಜಿ ಸಚಿವ ಪ್ರತಾಪ್ ಸಿಂಗ್ ಕಚಾರಿಯಾವಾಸ್ ಅವರನ್ನು ಕಣಕ್ಕೆ ಇಳಿಸಿದೆ. ಸುನಿಲ್ ಶರ್ಮಾ ಉಮೇದುವಾರಿಕೆಗೆ ಪಕ್ಷದ ಆಂತರಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.

ಸುನಿಲ್ ಶರ್ಮಾ ಅವರು ಜೈಪುರ ಡೈಲಾಗ್ (ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಬಗ್ಗೆ ಕಟು ಟೀಕೆ ಮಾಡುವ ವೇದಿಕೆ) ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರ ಹಿನ್ನೆಲೆಯಲ್ಲಿ ಅವರನ್ನು ಕಣದಿಂದ ಹಿಂದೆಸರಿಯುವಂತೆ ಮಾಡಲಾಗಿದೆ.

ಆದರೆ ಶರ್ಮಾ ಅವರು ತಮ್ಮ ವಿರುದ್ಧ ಕೇಳಿಬಂದಿರುವ ಆರೋಪವನ್ನು ತಳ್ಳಿಹಾಕಿದ್ದು, ಈ ವೇದಿಕೆ ತಮ್ಮನ್ನು ಕಾಂಗ್ರೆಸ್ ನ ನಿಲುವುಗಳನ್ನು ಪ್ರಸ್ತುತಪಡಿಸಲು ಆಹ್ವಾನಿಸಿತ್ತು ಅಷ್ಟೇ ಎಂಬ ಸಮರ್ಥನೆ ನೀಡಿದ್ದಾರೆ. ಸ್ಥಳೀಯರ ವಿರೋಧದ ಪರಿಣಾಮ ಸುನಿಲ್ ಶರ್ಮಾ ಗೆ ಟಿಕೆಟ್ ಕೈತಪ್ಪಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT