ಕವಾಸಿ ಲಖ್ಮಾ TNIE
ದೇಶ

ಮದ್ಯ ಹಗರಣದ ಆರೋಪಿ ಬಸ್ತಾರ್‌ನ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ!

ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಾಜಿ ಅಬಕಾರಿ ಸಚಿವ ಮತ್ತು ಮದ್ಯ ಹಗರಣದ ಆರೋಪಿ ಕವಾಸಿ ಲಖ್ಮಾ ಛತ್ತೀಸ್‌ಗಢದ ಬಸ್ತಾರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ರಾಯ್‌ಪುರ: ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಾಜಿ ಅಬಕಾರಿ ಸಚಿವ ಮತ್ತು ಮದ್ಯ ಹಗರಣದ ಆರೋಪಿ ಕವಾಸಿ ಲಖ್ಮಾ ಛತ್ತೀಸ್‌ಗಢದ ಬಸ್ತಾರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ ಮದ್ಯ ಹಗರಣ ಪ್ರಕರಣದಲ್ಲಿ ಇತರ 70 ಆರೋಪಿಗಳ ಪೈಕಿ ಲಖ್ಮಾ ಅವರ ಹೆಸರೂ ಸೇರಿದೆ. 2023ರಲ್ಲಿ ಕೊಂಟಾ (ಸುಕ್ಮಾ, ದಕ್ಷಿಣ ಬಸ್ತಾರ್) ವಿಧಾನಸಭೆ ಕ್ಷೇತ್ರದಿಂದ ಸತತ ಆರನೇ ಬಾರಿಗೆ ಗೆದ್ದಿರುವ ಪ್ರಮುಖ ಬುಡಕಟ್ಟು ಮುಖ್ಯಸ್ಥ ಕವಾಸಿ ಲಖ್ಮಾ ಅವರನ್ನು ಬಸ್ತಾರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನ ಹಾಲಿ ಸಂಸದ ಮತ್ತು ರಾಜ್ಯಾಧ್ಯಕ್ಷ ದೀಪಕ್ ಬೈಜ್ ಅವರ ಬದಲಿಗೆ ಆಯ್ಕೆ ಮಾಡಲಾಗಿದೆ.

ಶನಿವಾರ ತಡರಾತ್ರಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ನಾಲ್ಕನೇ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ. ಪೂರ್ವ-ಪ್ರಾಬಲ್ಯದ ಬುಡಕಟ್ಟು ಜನಸಂಖ್ಯೆಯನ್ನು ಒಳಗೊಂಡಿರುವ ಮಾವೋವಾದಿ ಪೀಡಿತ ಬಸ್ತಾರ್ ಕ್ಷೇತ್ರಕ್ಕೆ ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.

ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಲಖ್ಮಾ ವಿರುದ್ಧ ಪ್ರಕರಣ ದಾಖಲಿಸಲು ಇಡಿ ಕಳೆದ ವರ್ಷ ಅರ್ಜಿ ಸಲ್ಲಿಸಿತ್ತು. ಆದರೆ, ಇದೀಗ ಛತ್ತೀಸ್‌ಗಢ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆಪಾದಿತ ಹಗರಣದಲ್ಲಿ ಆರೋಪಿಗಳು ಸುಮಾರು 2,161 ಕೋಟಿ ರೂಪಾಯಿ ಅಕ್ರಮ ಆದಾಯವನ್ನು ಗಳಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ಏತನ್ಮಧ್ಯೆ, ಕಾಂಗ್ರೆಸ್ ತನ್ನ ಪಕ್ಷದ ಅಭ್ಯರ್ಥಿ ವಿರುದ್ಧದ ಆರೋಪಗಳನ್ನು ನಿರಾಕರಿಸಿದೆ. ಎಫ್‌ಐಆರ್‌ನಲ್ಲಿ ಮಾಜಿ ಸಚಿವರನ್ನು ಹೆಸರಿಸಿರುವುದು ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ಮಾನಹಾನಿ ಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೆಹಮಾನ್ ಪದಗ್ರಹಣ ಕಾರ್ಯಕ್ರಮ ಆಹ್ವಾನಕ್ಕೆ ಭಾರತದ ಒಪ್ಪಿಗೆ; ಬಾಂಗ್ಲಾಗೆ ತೆರಳಲಿರುವ ಭಾರತದ ಪ್ರತಿನಿಧಿ ಯಾರು?

T20 World Cup: ನೋ ಹ್ಯಾಂಡ್ ಶೇಕ್; ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ, ಭಾರತ ತಂಡದಲ್ಲಿ ಎರಡು ಬದಲಾವಣೆ!

ಬಾಂಗ್ಲಾದಲ್ಲಿ BNP ಅಧಿಕಾರ; ಹೊಸ ಸರ್ಕಾರದಲ್ಲಿ ಮುಹಮ್ಮದ್ ಯೂನಸ್ ಗೂ ಮಹತ್ವದ ಸ್ಥಾನ? ರೆಹಮಾನ್ ಬೆಂಬಲ?

ಕರ್ನಾಟಕದಲ್ಲಿ ಎಂಬಿಬಿಎಸ್ ಅಭ್ಯರ್ಥಿಗಳಿಂದ 75 ಲಕ್ಷ ರೂ. ವಂಚನೆ: ವೈದ್ಯನ ಮೇಲೆ ಪ್ರಕರಣ ದಾಖಲು

T20 World Cup 2026: ಹ್ಯಾಂಡ್ ಶೇಕ್ ವಿವಾದ, ಟೀಂ ಇಂಡಿಯಾ ವಿರುದ್ದ ಸಂಜಯ್ ಮಂಜ್ರೇಕರ್ ಕಿಡಿ! ನೆಟ್ಟಿಗರ ತರಾಟೆ

SCROLL FOR NEXT