ಆರ್ ಕೆಎಸ್ ಬದೌರಿಯಾ ಬಿಜೆಪಿಗೆ ಸೇರ್ಪಡೆ 
ದೇಶ

ವಾಯುಪಡೆಯ ಮಾಜಿ ಮುಖ್ಯಸ್ಥ ಬದೌರಿಯಾ ಬಿಜೆಪಿಗೆ ಸೇರ್ಪಡೆ

ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್ ಕೆ ಎಸ್ ಬದೌರಿಯಾ (ನಿವೃತ್ತ) ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಇವರು ಬಿಜೆಪಿಗೆ ಸೇರ್ಪಡೆಯಾದರು.

ನವದೆಹಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್ ಕೆ ಎಸ್ ಬದೌರಿಯಾ (ನಿವೃತ್ತ) ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಇವರು ಬಿಜೆಪಿಗೆ ಸೇರ್ಪಡೆಯಾದರು. ನಿವೃತ್ತ ಏರ್ ಚೀಪ್ ಮಾರ್ಷಲ್ ಆದ ಬದೌರಿಯಾ ಉತ್ತರ ಪ್ರದೇಶದವರು, ಅಲ್ಲಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳನ್ನು ಬಿಜೆಪಿ ಇನ್ನೂ ಪ್ರಕಟಿಸಿಲ್ಲ. ಬದೌರಿಯಾ ಅವರಿಗೆ ಅವಕಾಶ ನೀಡುವ ಮೂಲಕ ರಾಷ್ಟ್ರ ಸೇವೆಗೆ ಅವರ ಕೊಡುಗೆ ಬಳಸಿಕೊಳ್ಳಲು ಉದ್ದೇಶಿಸಿದೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬದೌರಿಯಾ, ತಮ್ಮ ಸೇವೆಯಲ್ಲಿ ಕಳೆದ ಎಂಟರಿಂದ 10 ವರ್ಷಗಳನ್ನು 'ಸುವರ್ಣ ಅವಧಿ' ಎಂದು ಬಣ್ಣಿಸಿದರು. ಸ್ವಾವಲಂಬನೆಯನ್ನು ಹೆಚ್ಚಿಸಲು ಮತ್ತು ಸಶಸ್ತ್ರ ಪಡೆಗಳನ್ನು ಆಧುನೀಕರಿಸಲು ಮೋದಿ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ಶ್ಲಾಘಿಸಿದರು. ವಿವಿಧ ಇಲಾಖೆಗಳಾದ್ಯಂತ ತೆಗೆದುಕೊಂಡ ಕ್ರಮಗಳು ದೇಶವ ಬಲಿಷ್ಠವಾಗಿ ಹೊರಹೊಮ್ಮಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಭಾರತೀಯ ವಾಯುಪಡೆಯಲ್ಲಿ ಬದೌರಿಯಾ ಅವರ ಸುದೀರ್ಘ ಸೇವೆಯನ್ನು ಠಾಕೂರ್ ಹಾಗೂ ತಾವ್ಡೆ ಶ್ಲಾಘಿಸಿದರು. ಮತ್ತು ರಕ್ಷಣಾ ಪಡೆಗಳಲ್ಲಿ ಸಕ್ರಿಯ ಪಾತ್ರ ವಹಿಸಿದ ನಂತರ ಈಗ ಅವರು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೊಡುಗೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬದೌರಿಯಾ ಅವರು ಐಎಎಫ್‌ನಲ್ಲಿ ಸುಮಾರು 40 ವರ್ಷಗಳನ್ನು ಕಳೆದಿದ್ದಾರೆ .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT