ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್  
ದೇಶ

ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಕಾಗದ ನೀಡಿಲ್ಲ: ಜಾರಿ ನಿರ್ದೇಶನಾಲಯ

ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಪೇಪರ್ ಗಳನ್ನು ನೀಡಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ನವದೆಹಲಿ: ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಪೇಪರ್ ಗಳನ್ನು ನೀಡಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ದೆಹಲಿ ಸಚಿವೆ ಅತಿಶಿ ಲಾಕ್ ಅಪ್ ನಿಂದ ಕೇಜ್ರಿವಾಲ್ ಅವರ ಮೊದಲ ಆದೇಶದ ಬಗ್ಗೆ ಮಾತನಾಡಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಈ ಸ್ಪಷ್ಟನೆ ನೀಡಿದೆ.

ಗುರುವಾರದಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮಾ.28 ವರೆಗೆ ನ್ಯಾಯಾಲಯ ಕೇಜ್ರಿವಾಲ್ ನ್ನು ತನಿಖಾ ಸಂಸ್ಥೆಯ ಕಸ್ಟಡಿಗೆ ಒಪ್ಪಿಸಿದೆ.

ದೆಹಲಿಯ ಜಲ ಸಚಿವ ಅತಿಶಿ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ, ರಾಷ್ಟ್ರ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಸೂಚನೆ ನೀಡಿ, ನಗರ ಸರ್ಕಾರವನ್ನು ನಡೆಸುವ ಬಗ್ಗೆ ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಕೇಜ್ರಿವಾಲ್ ಅವರು ತಮ್ಮ ಮೊದಲ ನಿರ್ದೇಶನವನ್ನು ನೀಡಿದ್ದಾರೆ ಎಂದು ಹೇಳಿದ್ದರು.

ಇ.ಡಿ ಕೇಂದ್ರ ಕಚೇರಿಯಿಂದ ಅರವಿಂದ್ ಕೇಜ್ರಿವಾಲ್ ಅವರಿಗೆ ಯಾವುದೇ ಕಂಪ್ಯೂಟರ್ ಅಥವಾ ಕಾಗದವನ್ನು ನೀಡಲಾಗಿಲ್ಲ ಎಂದು ಮೂಲಗಳು ಹೇಳಿವೆ. "ನಾವು ಸಚಿವೆಯ ಹೇಳಿಕೆ ಕುರಿತು ತನಿಖೆ ಮಾಡುತ್ತಿದ್ದೇವೆ" ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT