ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್  
ದೇಶ

ಕಸ್ಟಡಿಯಲ್ಲಿರುವ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಕಾಗದ ನೀಡಿಲ್ಲ: ಜಾರಿ ನಿರ್ದೇಶನಾಲಯ

ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಪೇಪರ್ ಗಳನ್ನು ನೀಡಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ನವದೆಹಲಿ: ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ ಗೆ ಕಂಪ್ಯೂಟರ್ ಅಥವಾ ಪೇಪರ್ ಗಳನ್ನು ನೀಡಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ದೆಹಲಿ ಸಚಿವೆ ಅತಿಶಿ ಲಾಕ್ ಅಪ್ ನಿಂದ ಕೇಜ್ರಿವಾಲ್ ಅವರ ಮೊದಲ ಆದೇಶದ ಬಗ್ಗೆ ಮಾತನಾಡಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಈ ಸ್ಪಷ್ಟನೆ ನೀಡಿದೆ.

ಗುರುವಾರದಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮಾ.28 ವರೆಗೆ ನ್ಯಾಯಾಲಯ ಕೇಜ್ರಿವಾಲ್ ನ್ನು ತನಿಖಾ ಸಂಸ್ಥೆಯ ಕಸ್ಟಡಿಗೆ ಒಪ್ಪಿಸಿದೆ.

ದೆಹಲಿಯ ಜಲ ಸಚಿವ ಅತಿಶಿ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ, ರಾಷ್ಟ್ರ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ನೀರು ಮತ್ತು ಒಳಚರಂಡಿ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಸೂಚನೆ ನೀಡಿ, ನಗರ ಸರ್ಕಾರವನ್ನು ನಡೆಸುವ ಬಗ್ಗೆ ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಕೇಜ್ರಿವಾಲ್ ಅವರು ತಮ್ಮ ಮೊದಲ ನಿರ್ದೇಶನವನ್ನು ನೀಡಿದ್ದಾರೆ ಎಂದು ಹೇಳಿದ್ದರು.

ಇ.ಡಿ ಕೇಂದ್ರ ಕಚೇರಿಯಿಂದ ಅರವಿಂದ್ ಕೇಜ್ರಿವಾಲ್ ಅವರಿಗೆ ಯಾವುದೇ ಕಂಪ್ಯೂಟರ್ ಅಥವಾ ಕಾಗದವನ್ನು ನೀಡಲಾಗಿಲ್ಲ ಎಂದು ಮೂಲಗಳು ಹೇಳಿವೆ. "ನಾವು ಸಚಿವೆಯ ಹೇಳಿಕೆ ಕುರಿತು ತನಿಖೆ ಮಾಡುತ್ತಿದ್ದೇವೆ" ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ