ಸಚಿವ ಅನಿತಾ ಆರ್ ರಾಧಾಕೃಷ್ಣನ್ 
ದೇಶ

ತಮಿಳುನಾಡು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಡಿಎಂಕೆ ಸಚಿವರ ವಿರುದ್ಧ ಎಫ್‌ಐಆರ್ ದಾಖಲು

ಬಿಜೆಪಿ ದಕ್ಷಿಣ ಜಿಲ್ಲಾಧ್ಯಕ್ಷ ಚಿತ್ರಾಂಗತನ್ ನೀಡಿದ ದೂರಿನ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ತಮಿಳುನಾಡು ಮೀನುಗಾರಿಕೆ, ಮೀನುಗಾರರ ಕಲ್ಯಾಣ ಮತ್ತು ಪಶುಸಂಗೋಪನೆ ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ತೂತುಕುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೂತುಕುಡಿ: ಬಿಜೆಪಿ ದಕ್ಷಿಣ ಜಿಲ್ಲಾಧ್ಯಕ್ಷ ಚಿತ್ರಾಂಗತನ್ ನೀಡಿದ ದೂರಿನ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ತಮಿಳುನಾಡು ಮೀನುಗಾರಿಕೆ, ಮೀನುಗಾರರ ಕಲ್ಯಾಣ ಮತ್ತು ಪಶುಸಂಗೋಪನೆ ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ತೂತುಕುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಪತಿ ಅವರಿಗೆ ಸಲ್ಲಿಸಿರುವ ದೂರಿನ ಪ್ರಕಾರ, ಮಾರ್ಚ್ 22ರಂದು ತಾಂಡಪಥುವಿನಲ್ಲಿ ನಡೆದ ಡಿಎಂಕೆ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮೀನುಗಾರಿಕಾ ಸಚಿವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಧಾಕೃಷ್ಣನ್ ಅವರ ಹೇಳಿಕೆ ಅಸಹ್ಯಕರ, ಹೇಯ ಮತ್ತು ಅಸಂಸದೀಯವಾಗಿದೆ. ತಮ್ಮ ಸೇಲಂ ರೋಡ್‌ಶೋನಲ್ಲಿ ದಿವಂಗತ ಮುಖ್ಯಮಂತ್ರಿ ಕಾಮರಾಜರನ್ನು ಹೊಗಳಿದ್ದಕ್ಕಾಗಿ ಅವರು ಮೋದಿಯನ್ನು ಕೆಟ್ಟದಾಗಿ ಟೀಕಿಸಿದ್ದಾರೆ ಎಂದು ಚಿತ್ರಾಂಗತನ್ ತಿಳಿಸಿದ್ದಾರೆ.

ಇದು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗಿದ್ದು, ಸಚಿವರು ಮತ್ತು ಸಭೆಯ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಚಿತ್ರಾಂಗತನ್ ಅವರ ದೂರಿನ ಮೇರೆಗೆ ಮೇಘನಪುರಂ ಪೊಲೀಸರು ರಾಧಾಕೃಷ್ಣನ್ ವಿರುದ್ಧ ಐಪಿಸಿ ಸೆಕ್ಷನ್ 294 (ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಈ ವಿಷಯವನ್ನು ಚುನಾವಣಾ ಆಯೋಗ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಕೊಂಡೊಯ್ಯುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಎಕ್ಸ್‌ನಲ್ಲಿ ಹೇಳಿರುವುದನ್ನು ಗಮನಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)

ಅಮೆರಿಕದ ಸುಂಕ ಸಮರದ ನಡುವೆ ಪ್ರಧಾನಿ ಮೋದಿ 'ಬಹು-ಜೋಡಣೆ' ನೀತಿ ಹೊಗಳಿದ ಮಾಜಿ ಪ್ರಧಾನಿ HD Devegowda

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್; Video

'ಉದಾತ್ತ ಹೃದಯ ಮತ್ತು ಸರಳತೆ': ಜನ್ಮದಿನಕ್ಕೆ ಶುಭ ಕೋರಿದ ಶಿವಣ್ಣಗೆ ಧನ್ಯವಾದ ಹೇಳಿದ ನಟ Pawan Kalyan

SCROLL FOR NEXT