ಜೆಎನ್ ಯುಎಸ್ ಅಧ್ಯಕ್ಷ ಧನಂಜಯ್ 
ದೇಶ

JNUSU ಚುನಾವಣೆಯಲ್ಲಿ ಎಬಿವಿಪಿಗೆ ಸೋಲು; 3 ದಶಕಗಳ ನಂತರ ಮೊದಲ ದಲಿತ ಅಧ್ಯಕ್ಷರಾಗಿ ಧನಂಜಯ್ ಆಯ್ಕೆ!

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟವು (ಜೆಎನ್‌ಯುಎಸ್‌ಯು) ಸುಮಾರು ಮೂರು ದಶಕಗಳ ನಂತರ ಎಡ-ಬೆಂಬಲಿತ ಗುಂಪುಗಳಿಂದ ತನ್ನ ಮೊದಲ ದಲಿತ ಅಧ್ಯಕ್ಷರನ್ನು ಭಾನುವಾರ ಆಯ್ಕೆ ಮಾಡಿದೆ. ಜೆಎನ್‌ಯುಎಸ್‌ಯು ಚುನಾವಣೆಯಲ್ಲಿ ತನ್ನ ಎಡಗುಂಪುಗಳ ಸಮಿತಿ ತನ್ನ ಸಮೀಪದ ಪ್ರತಿಸ್ಪರ್ಧಿ ಆರ್‌ಎಸ್‌ಎಸ್ ಸಂಯೋಜಿತ ಎಬಿವಿಪಿಯನ್ನು ಸೋಲಿಸಿ ಕ್ಲೀನ್ ಸ್ವೀಪ್ ಮಾಡಿದೆ.

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟವು (ಜೆಎನ್‌ಯುಎಸ್‌ಯು) ಸುಮಾರು ಮೂರು ದಶಕಗಳ ನಂತರ ಎಡ-ಬೆಂಬಲಿತ ಗುಂಪುಗಳಿಂದ ತನ್ನ ಮೊದಲ ದಲಿತ ಅಧ್ಯಕ್ಷರನ್ನು ಭಾನುವಾರ ಆಯ್ಕೆ ಮಾಡಿದೆ. ಜೆಎನ್‌ಯುಎಸ್‌ಯು ಚುನಾವಣೆಯಲ್ಲಿ ತನ್ನ ಎಡಗುಂಪುಗಳ ಸಮಿತಿ ತನ್ನ ಸಮೀಪದ ಪ್ರತಿಸ್ಪರ್ಧಿ ಆರ್‌ಎಸ್‌ಎಸ್ ಸಂಯೋಜಿತ ಎಬಿವಿಪಿಯನ್ನು ಸೋಲಿಸಿ ಕ್ಲೀನ್ ಸ್ವೀಪ್ ಮಾಡಿದೆ.

ನಾಲ್ಕು ವರ್ಷಗಳ ವಿರಾಮದ ನಂತರ ನಡೆದ ಚುನಾವಣೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಧನಂಜಯ್ ಅವರು 1,676 ಮತಗಳನ್ನು ಗಳಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ (ಎಬಿವಿಪಿ) ಉಮೇಶ್ ಸಿ ಅಜ್ಮೀರಾ ವಿರುದ್ಧ 2,598 ಮತಗಳನ್ನು ಪಡೆಯುವ ಮೂಲಕ ಜೆಎನ್‌ಯುಎಸ್‌ಯು ಅಧ್ಯಕ್ಷ ಸ್ಥಾನವನ್ನು ಗೆದ್ದರು. ಧನಂಜಯ್ ಬಿಹಾರದ ಗಯಾ ಮೂಲದವರಾಗಿದ್ದು, 1996-97ರಲ್ಲಿ ಚುನಾಯಿತರಾದ ಬಟ್ಟಿ ಲಾಲ್ ಬೈರ್ವಾ ನಂತರ ಎಡಪಕ್ಷದಿಂದ ಮೊದಲ ದಲಿತ ಅಧ್ಯಕ್ಷರಾಗಿದ್ದಾರೆ.

ಗೆಲುವಿನ ನಂತರ ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಧನಂಜಯ್, "ಈ ಗೆಲುವು ದ್ವೇಷ ಮತ್ತು ಹಿಂಸಾಚಾರದ ರಾಜಕೀಯವನ್ನು ತಿರಸ್ಕರಿಸುವ ಜಿಎನ್ ಯು ವಿದ್ಯಾರ್ಥಿಗಳ ಜನಾಭಿಪ್ರಾಯವಾಗಿದೆ. ವಿದ್ಯಾರ್ಥಿಗಳು ಮತ್ತೊಮ್ಮೆ ನಮ್ಮ ಮೇಲೆ ವಿಶ್ವಾಸವನ್ನು ತೋರಿಸಿದ್ದಾರೆ. ನಾವು ಅವರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸಲಿದ್ದು, ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಗಳತ್ತ ಗಮನ ಹರಿಸುವುದಾಗಿ ತಿಳಿಸಿದರು. ಶುಕ್ರವಾರ ನಡೆದ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಕಳೆದ 12 ವರ್ಷಗಳಲ್ಲೇ ಅತಿ ಹೆಚ್ಚು ಶೇ.73ರಷ್ಟು ಮತದಾನವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT